ಜ್ಯೂ.ಎನ್‌ಟಿಆರ್ ಚಿತ್ರಕ್ಕೆ ಸಮಂತಾ ನೋ ಅಂದಿದ್ಯಾಕೆ?

Public TV
1 Min Read

`ಆರ್‌ಆರ್‌ಆರ್’ ಚಿತ್ರದ ಸಕ್ಸಸ್ ನಂತರ ಜ್ಯೂ.ಎನ್‌ಟಿಆರ್‌ಗೆ ಮತ್ತಷ್ಟು ಡಿಮ್ಯಾಂಡ್ ಜಾಸ್ತಿ ಆಗಿದೆ. ಸದ್ಯ ಡೈರೆಕ್ಟರ್ ಕೊರಟಾಲ ಶಿವ ನಿರ್ದೇಶನದ ಚಿತ್ರಕ್ಕೆ ಜ್ಯೂ.ಎನ್‌ಟಿಆರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇನ್ನೂ ಟಿಟೌನ್ ಅಡ್ಡಾದಲ್ಲಿ ಹೊಸ ವಿಚಾರವೊಂದು ಸೌಂಡ್ ಮಾಡುತ್ತಿದೆ. ಜ್ಯೂ.ಎನ್‌ಟಿಆರ್ ಈ ಹೊಸ ಸಿನಿಮಾಗೆ ಸಮಂತಾ ನೋ ಅಂದಿದ್ದಾರೆ.

ಟಾಲಿವುಡ್ ಸ್ಟಾರ್ ನಟ ಜ್ಯೂ.ಎನ್‌ಟಿಆರ್ `ಆರ್‌ಆರ್‌ಆರ್’ ಚಿತ್ರದ ಸಕ್ಸಸ್ ನಂತರ ಚಿತ್ರದ ಸೆಲೆಕ್ಷನ್‌ನಲ್ಲಿ ಮತ್ತಷ್ಟು ಚ್ಯೂಸಿಯಾಗಿದ್ದಾರೆ. ಸದ್ಯ ಕೊರಟಾಲ ಶಿವ ನಿರ್ದೇಶನದ ಹೊಸ ಚಿತ್ರಕ್ಕೆ ಜ್ಯೂ.ಎನ್‌ಟಿಆರ್ ಓಕೆ ಅಂದಿದ್ದಾರೆ. ಭಿನ್ನ ಕಥೆಯ ಮೂಲಕ ಮತ್ತೆ ತಾರಕ್ ಎಂಟ್ರಿ ಕೊಡಲಿದ್ದಾರೆ.

ಜ್ಯೂ.ಎನ್‌ಟಿಆರ್ ನಟನೆಯ ಹೊಸ ಚಿತ್ರಕ್ಕೆ ನಾಯಕಿ ನಟಿಸಲು ಸಮಂತಾಗೆ ಆಫರ್ ನೀಡಲಾಗಿತ್ತು. ಪುಷ್ಪ ಚಿತ್ರದ ಸಕ್ಸಸ್ ನಂತರ ಸಮಂತಾ ಮೇಲಿನ ಕ್ರೇಜ್ ಮತ್ತಷ್ಟು ಜಾಸ್ತಿಯಾಗಿದೆ. ಹಾಗಾಗಿ ಸಮಂತಾ ಅವರೇ ಸೂಕ್ತ ಎಂದೆನಿಸಿ ಚಿತ್ರತಂಡ ನಟಿಸಲು ಕೇಳಿಕೊಂಡಿದ್ದಾರೆ. ನಿರ್ದೇಶಕ ಕೊರಟಾಲ ಶಿವ ಹೀರೋಯಿನ್‌ಗೆ 2.5 ಕೋಟಿ ಆಫರ್ ಮಾಡಿದ್ದರಂತೆ. ಆದರೆ ಸಮಂತಾ 4 ಕೋಟಿ ರೂಪಾಯಿ ಸಮಂತಾ ಬೇಡಿಕೆ ಇಟ್ಟಿದ್ದಾರೆ. ಸಂಭಾವನೆ ವಿಚಾರ ಸರಿ ಹೋಗದ ಕಾರಣ ಸ್ಯಾಮ್ ಈ ಚಿತ್ರಕ್ಕೆ ನೋ ಅಂದಿದ್ದಾರೆ. ಇದನ್ನೂ ಓದಿ:ಹಾಲಿವುಡ್‌ಗೆ ಹಾರಿದ ಸ್ಟಾರ್ ನಟ ಅಲ್ಲು ಅರ್ಜುನ್

ಈ ಹಿಂದೆ ಜ್ಯೂ.ಎನ್‌ಟಿಆರ್ ಮತ್ತು ಸಮಂತಾ ಕಾಂಬಿನೇಷನ್‌ನಲ್ಲಿ `ಜನತಾ ಗ್ಯಾರೇಜ್’ ಚಿತ್ರ ಅಭಿಮಾನಿಗಳ ಮನಗೆದ್ದಿತ್ತು. ಆದರೆ ಮತ್ತೆ ಈ ಜೋಡಿಯನ್ನ ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಫ್ಯಾನ್ಸ್ಗೆ ನಿರಾಸೆ ಆಗಿದೆ. ಆದಷ್ಟು ಬೇಗ ಈ ಜೋಡಿ ಮತ್ತೆ ತೆರೆಯ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿ ಎಂಬುದೇ ಅಭಿಮಾನಿಗಳ ಆಶಯ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *