ಮಠಕ್ಕೆ ಮುರುಘಾ ಶ್ರೀಗಳು ವಾಪಸ್- ಶಾಂತಿ, ಸಹನೆಯಿಂದ ಇರುವಂತೆ ಮನವಿ

Public TV
1 Min Read

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳು ಇದೀಗ ಮಠಕ್ಕೆ ಆಗಮಿಸಿದ್ದಾರೆ.

ಶ್ರೀಗಳು ಮಠದ ಆವರಣದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿ, ಬಂದಿರುವ ಸಂದರ್ಭವನ್ನು ಧೈರ್ಯವಾಗಿ ಎದುರಿಸುತ್ತೇನೆ. ಸಮಸ್ಯೆ ನಿವಾರಣೆ ಮಾಡುವ ಪ್ರಯತ್ನ ಮಾಡುತ್ತೇನೆ. ಇದು ಸಂಕಷ್ಟದ ಸಮಯವಾಗಿದೆ. ಯಾರಿಗೂ ಆತಂಕ ಬೇಡ. ಎಲ್ಲರೂ ಧೈರ್ಯ ಸಹನೆಯಿಂದ ಇರಿ ಎಂದು ಮನವಿ ಮಾಡಿಕೊಂಡರು.

ಬುದ್ಧಿವಂತಿಕೆಯಿಂದ ಸಮಸ್ಯೆ ಎದುರಿಸಬೇಕು. ಮಠದ ಭಕ್ತರು ಸಹಕರಿಸಬೇಕು. ಈ ವಿಚಾರದಲ್ಲಿ ಯಾವುದೇ ಪಲಾಯನವಾದವಿಲ್ಲ. ಮಠದ ಒಳಗೆ ನಡೆಯುತ್ತಿದ್ದ ಪಿತೂರಿ ಈಗ ಹೊರಗೆ ಬಂದಿದೆ. ಈ ನೆಲದ ಕಾನೂನನ್ನು ಗೌರವಿಸಬೇಕು. ಇಂತಹ ಸಂದರ್ಭಗಳು ಇದೇ ಮೊದಲೇನು ಅಲ್ಲ. ಹೀಗಾಗಿ ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಶ್ರೀಗಳು ತಿಳಿಸಿದರು.

ಅಜ್ಞಾತ ಸ್ಥಳದಿಂದ ಶ್ರೀಗಳು ಮಠಕ್ಕೆ ಆಗಮಿಸುತ್ತಿದ್ದಂತೆಯೇ ಭಕ್ತರು ಶ್ರೀಗಳ ಪರ ಘೋಷಣೆ ಕೂಗಿದ್ದಾರೆ. ಇನ್ನು ಯಾವುದೇ ಅಹಿತರ ಘಟನೆ ನಡೆಯದಂತೆ ಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *