ಲೋಕಕಲ್ಯಾಣಕ್ಕಾಗಿ 220 ಕಿ.ಮೀ. ಉರುಳು ಸೇವೆ ಮಾಡಿದ ಪಂಡರಪುರದ ವಿಠ್ಠಲನ ಭಕ್ತ

By
1 Min Read

ಚಿಕ್ಕೋಡಿ: ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ದೇವಸ್ಥಾನಗಳಲ್ಲಿ ಉರುಳು ಸೇವೆ ಮಾಡೋದನ್ನ ಕೇಳಿದ್ದೀವಿ, ನೋಡಿದ್ದೀವಿ‌. ಅಷ್ಟೆ ಯಾಕೆ ಪಾದಯಾತ್ರೆ ಮೂಲಕ ತಮ್ಮ ಮನೆದೇವರ ಹರಕೆ ತೀರಿಸಿದವರನ್ನೂ ಸಹ ನೋಡಿರ್ತೀವಿ. ಆದರೆ ಇಲ್ಲೊಬ್ಬ ವಿಠ್ಠಲನ ಭಕ್ತ ಲೋಕಕಲ್ಯಾಣಕ್ಕಾಗಿ ಸುಮಾರು 220 ಕಿ.ಮೀ. ಉರುಳು ಸೇವೆ ಮಾಡಿ ಪಂಡರಪುರದ ವಿಠ್ಠಲನ ಕೃಪೆಗೆ ಪಾತ್ರನಾಗಿದ್ದಾ‌ನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೇವನೂರು ಗ್ರಾಮದ ನಿವಾಸಿ ಶಹಾಜೀ ಜಾಧವ್ ಉರುಳು ಸೇವೆ ಸಲ್ಲಿಸಿದ ಭಕ್ತ. ಶಹಾಜೀ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಿಂದ ಮಹಾರಾಷ್ಟ್ರದ ಪಂಡರಪುರದವರೆಗೂ ಉರುಳು ಸೇವೆ ಮಾಡಿದ್ದಾರೆ‌‌‌.‌ ಇದನ್ನೂ ಓದಿ: 60 ವರ್ಷ ವಯಸ್ಸಾಗಿದ್ದು, ಹೃದಯ ತುಂಬಾ ಸೂಕ್ಷ್ಮವಾಗಿದ್ರಿಂದ ಪ್ರಾಬ್ಲಂ ಬರೋದು ಸಹಜ: ಡಾ. ರಂಗನಾಥ್

ಕೋವಿಡ್, ನೆರೆ ತೊಲಗಿಸಿ ಇಡೀ ಮನುಕುಲದ ಒಳಿತಿಗಾಗಿ ವಿಠ್ಠಲನ ಬಳಿ ಪ್ರಾರ್ಥಿಸಿ ಶಹಾಜೀ ಹರಕೆ ತೀರಿಸಿದ್ದಾರೆ. ದಿನಕ್ಕೆ ನಾಲ್ಕು ಕಿ.ಮೀ. ಉರುಳು ಸೇವೆ ಮಾಡಿ ಶಹಾಜೀ ಪಂಡರಪುರ ತಲುಪಿದ್ದಾರೆ. ವಿಜ್ಞಾನ-ತಂತ್ರಜ್ಞಾನದ ಯುಗದಲ್ಲಿ ದೇವರು ಮತ್ತು ಭಕ್ತಿ ಎಂಬ ನಂಬಿಕೆಗಳು ಜನರ ಮನಸ್ಸಿನಲ್ಲಿ ಇನ್ನೂ ಇದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *