ನಂದಿಬೆಟ್ಟದಲ್ಲಿ ಎರಡು ಕಡೆ ಗುಡ್ಡ ಕುಸಿತ

By
1 Min Read

ಚಿಕ್ಕಬಳ್ಳಾಪುರ: ಸತತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ಎರಡು ಕಡೆಗಳಲ್ಲಿ ಗುಡ್ಡ ಕುಸಿತವಾಗಿದೆ.

ರಾಜ್ಯಾದ್ಯಂತ ಕಳೆದ 2 ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲೆಡೆ ಅನಾಹುತಗಳಾಗುತ್ತಿವೆ. ಅದೇ ರೀತಿ ಪ್ರವಾಸಿಗರ ನೆಚ್ಚಿನ ತಾಣವಾದ ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿಯೂ ಗುಡ್ಡ ಕುಸಿತವಾಗಿದೆ. ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದಿದೆ.

ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ ಮೆಟ್ಟಿಲು ಮಾರ್ಗದ ಕಡೆ ವೀರಭದ್ರ ಸ್ವಾಮಿ ದೇಗುಲದ ಭಾಗದಲ್ಲಿ ಭೂ ಕುಸಿತ ಆಗಿದೆ. ನ್ನೂ ಇದೇ ಸುಲ್ತಾನಪೇಟೆ ಗ್ರಾಮದ ಕಡೆ ಮತ್ತದು ಭಾಗದಲ್ಲಿ ಭೂ ಕುಸಿತ ಆಗಿದೆ. ಬೃಹತ್ ಗಾತ್ರದ ಕಲ್ಲು ಬಂಡೆಗಳು ಮರಗಳು ಮಣ್ಣು ಸಮೇತ ಕೊಚ್ಚಿಕೊಂಡು ಬಂದಿವೆ. ಈ ಗುಡ್ಡ ಕುಸಿತ ಉಂಟಾದ ಭಾಗದಿಂದ ಝರಿಯಂತೆ ನೀರು ಹರಿದುಬರುತ್ತಿದೆ. 2 ಕಡೆಗಳಲ್ಲಿ ಗುಡ್ಡ ಕುಸಿತವಾಗಿರುವುದರಿಂದ ಸುಲ್ತಾನಪೇಟೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಕಲ್ಲು ಬಂಡೆಗಳು ಉರುಳಿ ಗ್ರಾಮಕ್ಕೆ ಬರುವ ಭೀತಿಯಲ್ಲಿದ್ದಾರೆ. ಇದನ್ನೂ ಓದಿ: 4 ದಿನ ರಾಜ್ಯಾದ್ಯಂತ ಮಳೆ – ಎಲ್ಲೆಲ್ಲಿ ಮಳೆಯಾಗಲಿದೆ?

ಕಳೆದ ವರ್ಷ ಆಗಸ್ಟ್ 25ರಂದು ಸಹ ಇದೇ ರೀತಿ ಗುಡ್ಡ ಕುಸಿತ ಆಗಿತ್ತು. ಆ ಸಮಯದಲ್ಲಿ ರಸ್ತೆ ಮಾರ್ಗದಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಆಗಿತ್ತು. ಇದರಿಂದ ಕೆಲವು ತಿಂಗಳವರೆಗೂ ನಂದಿ ಬೆಟ್ಟಕ್ಕೆ ಹೋಗಲು ಪ್ರವಾಸಿಗರಿಗೆ ಅವಕಾಶವನ್ನು ನಿಷೇಧಿಸಲಾಗಿತ್ತು. ಇದೀಗ ಮತ್ತೆ ಭಾರೀ ಮಳೆಗೆ ಈ ವರ್ಷವೂ ಎರಡು ಕಡೆ ಗುಡ್ಡ ಕುಸಿತವಾಗಿದೆ. ಆದರೆ ಸ್ತೆ ಮಾರ್ಗದಲ್ಲಿ ಯಾವುದೇ ಭೂ ಕುಸಿತ ಆಗಿಲ್ಲ. ಹೀಗಾಗಿ ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ. ಸುಲ್ತಾನಪೇಟೆ ಗ್ರಾಮದ ಕಡೆ ಭೂ ಕುಸಿತ ಆಗಿರೋದ್ರಿಂದ ಬೆಟ್ಟದಿಂದ ಹರಿದುಬರುತ್ತಿರುವ ನೀರು ಬೆಟ್ಟದ ಕೆಳಭಾಗದ ಜಮೀನುಗಳಿಗೆ ನುಗ್ಗಿದೆ. ಗ್ರಾಮಸ್ಥರಿಗೂ ಸಹ ಬಂಡೆಗಳು ಉರುಳಿಬರುವ ಆತಂಕ ಕಾಡುತ್ತಿದೆ. ಇದನ್ನೂ ಓದಿ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಯುವಕ ಮರ್ಡರ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *