ಬೆಂಗಳೂರು: ಇಂದು ನಗರದ ಮಣಿಪಾಲ್ ಸಂಸ್ಥೆಗಳ(Manipal Groups) ಮೇಲೆ ಏಕಕಾಲಕ್ಕೆ ಐಟಿ(IT) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಐಟಿ(Income Tax) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸದನದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದ ಉಮೇಶ್ ಕತ್ತಿ ತಂದೆ
200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಒಟ್ಟು 20 ಕಡೆಗಳಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಓಲ್ಡ್ ಏರ್ ಪೋರ್ಟ್ ರೋಡ್, ಕನ್ನಿಂಗ್ ಹ್ಯಾಮ್ ರೋಡ್, ಯಶವಂತಪುರ, ಏರ್ ಪೋರ್ಟ್ ರೋಡ್ ಸೇರಿದಂತೆ 20 ಕಡೆ ದಾಳಿ ನಡೆದಿದೆ. ಐಟಿ ಅಧಿಕಾರಿಗಳು ಬೆಳಗ್ಗೆಯಿಂದ ಕಾರ್ಯಾಚರಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಉಮೇಶ್ ಕತ್ತಿ ನಿಧನ: ಸಂಜೆ ಬೆಲ್ಲದ ಬಾಗೇವಾಡಿ ತೋಟದಲ್ಲಿ ಅಂತ್ಯಕ್ರಿಯೆ