ಉಮೇಶ್ ಕತ್ತಿ ನಿಧನಕ್ಕೆ ಪ್ರಧಾನಿ ಮೋದಿ, ಬಿಎಸ್‍ವೈ ಕಂಬನಿ

Public TV
1 Min Read

ನವದೆಹಲಿ/ಬೆಂಗಳೂರು: ಸಚಿವ ಉಮೇಶ್ ಕತ್ತಿ(Umesh Katti) ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರು ಸೇರಿದಂತೆ ರಾಜ್ಯಾದ್ಯಂತ ಜನ ಕಂಬನಿ ಮಿಡಿಯುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ಕೂಡ ಕತ್ತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ  ಮೋದಿ, ಉಮೇಶ್ ಕತ್ತಿ ಅವರು ಓರ್ವ ಅನುಭವಿ ನಾಯಕರಾಗಿದ್ದು, ಕರ್ನಾಟಕದ ಅಭಿವೃದ್ಧಿಗೆ ಅಭೂತಪೂರ್ವ ಕೊಡುಗೆ ನೀಡಿದ್ದರು. ಇದೀಗ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಈ ಸಮಯದಲ್ಲಿ ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಪಾಲುದಾರನಾಗಿದ್ದೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B S Yediyurappa) ಪ್ರತಿಕ್ರಿಯಿಸಿ, ಉಮೇಶ್ ಕತ್ತಿ ಅವರ ನಿಧನ ರಾಜ್ಯಕ್ಕೆ, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಸುದ್ದಿ ನೋವು ತರಿಸಿದೆ. ಭಗವಂತ ಅವರ ಕುಟುಂಬಕ್ಕೆ, ಕ್ಷೇತ್ರದ ಜನತೆಗೆ ನೋವು ತಡೆದುಕೊಳ್ಳುವ ಶಕ್ತಿ ಭರಿಸಲಿ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದರು. 9 ಬಾರಿ ಶಾಸಕರಾಗಿ, 4 ಬಾರಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ನಾನು ಸಹ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಉಮೇಶ್ ಕತ್ತಿ ನಿಧನದ ಸುದ್ದಿ ಕೇಳಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮಕ್ಕೆ ಜನ ಆಗಮಿಸುತ್ತಿದ್ದಾರೆ. ಸದ್ಯ ಕತ್ತಿ ಸ್ವಗೃಹದಲ್ಲಿ ನಿರವ ಮೌನ ಆವರಿಸಿದ್ದು, ನಿಧನ ಸುದ್ದಿ ಕೇಳಿ ಸಂಬಂಧಿಕರು ಮನೆಗೆ ಆಗಮಿಸುತ್ತಿದ್ದಾರೆ. ಇತ್ತ ಬೆಳಗಾವಿ ಏರ್ಪೋರ್ಟ್ (Belagavi Airport) ನಲ್ಲಿ ಬೆಂಬಲಿಗರು ಕಣ್ಣೀರು ಸುರಿಸಿಕೊಂಡು ಕತ್ತಿ ಪಾರ್ಥಿವ ಶರೀರಕ್ಕಾಗಿ ಕಾಯುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *