ಆಸ್ತಿ ವಿಚಾರಕ್ಕೆ ನಡುರಸ್ತೆಯಲ್ಲಿ ಉರುಳಿತು ಯುವಕನ ಹೆಣ

Public TV
1 Min Read

ಗದಗ: ಬೈಕ್‍ನಲ್ಲಿ (Bike) ಹೊಲಕ್ಕೆ ಹೊರಟಿದ್ದ ಯುವಕನನ್ನು (Young Man) ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಗುರ್ಲಕಟ್ಟಿ ಗ್ರಾಮದಲ್ಲಿ ನಡೆದಿದೆ.

ಸಂಗನಗೌಡ ನಾಯ್ಕನೂರ (30) ಎಂಬಾತ ಕೊಲೆಯಾದ ದುರ್ದೈವಿ. ಗುರ್ಲಕಟ್ಟಿ ಗ್ರಾಮ ಪಂಚಾಯತಿ ಸಮೀಪದಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದ ಸಂಗನಗೌಡನನ್ನು ನಾಲ್ವರು ಅಡ್ಡಗಟ್ಟಿದ್ದಾರೆ. ಏಕಾಏಕಿ ಮೂವರು ಸಂಗನಗೌಡನನ್ನು ಗಟ್ಟಿಯಾಗಿ ಹಿಡಿದಿದ್ದಾರೆ. ಬಳಿಕ ಓರ್ವ ಕುತ್ತಿಗೆ ಹಾಗೂ ಎದೆಗೆ ಬರ್ಬರವಾಗಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ. ಆಸ್ತಿ (Property) ವಿಚಾರಕ್ಕೆ ಸಹೋದರ ಸಂಬಂಧಿಗಳು ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಬ್ಯಾಂಕ್‍ಗೆ ರೈಫಲ್ ಹಿಡಿದು ನುಗ್ಗಿದ ಸನ್ಯಾಸಿ – ಸಾಲ ನೀಡದ್ದಕ್ಕೆ ಲೂಟಿ ಮಾಡೋದಾಗಿ ಬೆದರಿಕೆ

crime

ಈ ಘಟನೆಯಲ್ಲಿ ಈರಣ್ಣ ಅಂತಕ್ಕನವರ್, ಚಂದ್ರಗೌಡ ಪಾಟೀಲ್, ಮಹೇಶಗೌಡ ಪಾಟೀಲ್ ಹಾಗೂ ಸುರೇಶಗೌಡ ಪಾಟೀಲ್ ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಘಟನೆಗೆ ಸಂಬಂಧಿಸಿ ಗದಗ (Gadag) ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ನರಗುಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ನಿರ್ಮಾಣ ಹಂತದ ಗೋಡೆ ಕುಸಿತ- ನಾಲ್ವರು ಸಾವು, 9 ಮಂದಿಗೆ ಗಾಯ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *