ಮಂಗಳೂರು ಹಾಸ್ಟೆಲ್‌ನ ಕಿಟಕಿ ರಾಡ್ ಮುರಿದು ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ

Public TV
1 Min Read

ಮಂಗಳೂರು: ಮಂಗಳೂರಿನ (Mangaluru) ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನೈ (Chennai) ನಲ್ಲಿ ಪತ್ತೆಯಾಗಿದ್ದಾರೆ.

ಚೆನ್ನೈನಲ್ಲಿ ಪತ್ತೆಯಾದ ಮೂವರು ವಿದ್ಯಾರ್ಥಿನಿಯರನ್ನು ಮಂಗಳೂರು ಪೊಲೀಸರು ಮಂಗಳೂರಿಗೆ ಕರೆತಂದಿದ್ದಾರೆ. ವಿದ್ಯಾರ್ಥಿನಿಯರ ತಂಡ ಮಂಗಳೂರಿನಿಂದ ರೈಲಿನ ಮೂಲಕ ಕೊಯಂಬತ್ತೂರು ತೆರಳಿದ್ದರು. ಕೊಯಂಬತ್ತೂರಿನಿಂದ ಬಸ್ ಮೂಲಕ ಪಾಂಡಿಚೇರಿಗೆ ಪ್ರಯಾಣ ಬೆಳಸಿ, ಮತ್ತೆ ಪಾಂಡಿಚೇರಿಯಿಂದ ವಾಪಸ್ ಚೆನೈಗೆ ಬಂದಿದ್ದರು. ದೂರದ ಊರು ಸುತ್ತಾಡಿ ಮರಳಿ ಮನೆ ಸೇರಲು ವಿದ್ಯಾರ್ಥಿನಿಯರು ನಿರ್ಧರಿಸಿದ್ದರು ಎಂಬ ವಿಷಯ ಇದೀಗ ಬಯಲಾಗಿದೆ. ಇದನ್ನೂ ಓದಿ: ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಪುಟ್ಟಸ್ವಾಮಿ ನಿಧನಕ್ಕೆ ಡಿಕೆಶಿ ಸಂತಾಪ

ಸೆ. 21ರಂದು ನಗರದ ಖಾಸಗಿ ಕಾಲೇಜೊಂದರ (Private College) ಹಾಸ್ಟೆಲ್‍ನಲ್ಲಿದ್ದ (Hostel) ಮೂವರು ವಿದ್ಯಾರ್ಥಿನಿಯರು (Students) ಹಾಸ್ಟೆಲ್ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದರು. ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಹಾಸ್ಟೆಲ್‍ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದರು. ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಎಂದು ಪತ್ರ ಬರೆದಿಟ್ಟು ಹಾಸ್ಟೆಲ್‍ನ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದರು. ಇದನ್ನೂ ಓದಿ: ಹಾಸ್ಟೆಲ್‍ನ ಕಿಟಕಿ ರಾಡ್ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *