ಸಿದ್ದರಾಮಯ್ಯನವರೇ 10% ಕಮಿಷನ್‍ ತಗೊಳ್ಳಿ – ಬಿಜೆಪಿಯವರ ತರ 40% ಬೇಡ: ನಿಡುಮಾಮಿಡಿ ಶ್ರೀ

Public TV
1 Min Read

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯನವರೇ (Siddaramaiah) 10% ಕಮಿಷನ್‍ನಲ್ಲೇ (Commission) ಇರಿ. ಬಿಜೆಪಿಯವರ (BJP) ತರ 40% ಕಮಿಷನ್‍ ತಗೋಬೇಡಿ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲ ದೇಶಿ ಕೇಂದ್ರ ಸ್ವಾಮೀಜಿ ವಿವಾದಾತ್ಮಕ ಸಲಹೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ನಗರದ ಅಂಬೇಡ್ಕರ್ ಸಮಾನತಾ ಸೌಧದಲ್ಲಿ ದಿವಂಗತ ಪ್ರೋಫೆಸರ್‌ ಬಿ.ಗಂಗಾಧರಮೂರ್ತಿ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಶ್ರೀಗಳು, ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು (Narendra Modi) 10% ಸರ್ಕಾರ ಅಂತ ಟೀಕಿಸಿದ್ರು, ಪರವಾಗಿಲ್ಲ ನೀವು 10% ನಲ್ಲೇ ಇರಿ. ಇವರ ತರ 40% ಆಗಬೇಡಿ. ಈ 40% ಸರ್ಕಾರ ತಪ್ಪಿಸಿ. 10%ಗೆ ಬನ್ನಿ ನಾವ್ ಓಪ್ಕೋತಿವಿ. ನಾವೆಲ್ಲರೂ ಒಪ್ಪಿಕೊಳ್ಳೋಣ ಅಂತ ಹೇಳಿದ್ದಾರೆ. ಇದನ್ನೂ ಓದಿ: ಅ.1 ರಿಂದ ದೇಶದಲ್ಲಿ 5G ಸೇವೆ ಆರಂಭ – ಮೋದಿ ಚಾಲನೆ

ಬೆಲೆ ಏರಿಕೆ ತರ ಭ್ರಷ್ಟಾಚಾರ ಏರಿಕೆ ಆಗ್ತಾನೇ ಇದೆ. ಭ್ರಷ್ಟಾಚಾರವನ್ನು ಯಾವ ಪಕ್ಷದಿಂದಲೂ ನಿವಾರಣೆ ಮಾಡಲು ಸಾಧ್ಯವಿಲ್ಲ. ವ್ಯವಸ್ಥೆಯಲ್ಲಿ ಇಂತಹ ಅಸಹಾಯಕತೆ ನಿರ್ಮಾಣ ಆಗಿದೆ. ಗಣನೀಯವಾಗಿ ತಗ್ಗಿಸುವ ಪ್ರಯತ್ನವನ್ನಾದ್ರೂ ಮಾಡಿ ಸಿದ್ದರಾಮಯ್ಯನವರೇ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಈ ಅಂಶ ಆಳವಡಿಸಿ. ಭ್ರಷ್ಟಾಚಾರವನ್ನು ಗಣನೀಯವಾಗಿ ತಗ್ಗಿಸುವ ಭರವಸೆ ಕೊಡಿ. ಜನರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ್ರೆ ನಿಮ್ಮನ್ನು ಸ್ವಾಗತಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪರೀಕ್ಷೆ ಪಾಸ್ ಆಗ್ಬೇಕು ಅಂದ್ರೆ 35 ಮಾರ್ಕ್ಸ್ ಪಡಿಬೇಕು – ಬಿಜೆಪಿ ಸರ್ಕಾರದಲ್ಲಿ ಬಿಲ್ ಪಾಸ್ ಆಗ್ಬೇಕು ಅಂದ್ರೆ 40% ಕೊಡಬೇಕು: ಕಾಂಗ್ರೆಸ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *