ಸ್ನೇಹಿತರಿಗೆ ಮೆಸೇಜ್ ಮಾಡಿ ಯುವಕ ನೀರಿಗೆ ಹಾರಿದ!

Public TV
1 Min Read

ಚಾಮರಾಜನಗರ: ತನ್ನ 2-3 ಸ್ನೇಹಿತರಿಗೆ (Friends) ಸಂದೇಶ (Message) ಕಳುಹಿಸಿ ಯುವಕನೊಬ್ಬ ನೀರಿಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಡ್ಯಾಂನಲ್ಲಿ ನಡೆದಿದೆ.

ಕಲ್ಲಹಳ್ಳಿ ಗ್ರಾಮದ ಸಚಿನ್(24) ಮೃತ ಯುವಕ. ಖಾಸಗಿ ಫೈನಾನ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಸಾಲದ (Loan) ಸುಳಿಗೆ ಸಿಲುಕಿ  ಮಾನಸಿಕ ಒತ್ತಡ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: 8 ಜನರಿಗೆ ಅಂಗಾಂಗ ದಾನ – ಸಾವಿನಲ್ಲೂ ಸಾರ್ಥಕತೆ ಮೆರೆದ ಕೊಡಗಿನ ಶಿಕ್ಷಕಿ

ಯುವಕ ಆತ್ಮಹತ್ಯೆಗೂ ಮುನ್ನ ತನ್ನ ಸ್ನೇಹಿತರಿಗೆ ವಾಟ್ಸಪ್ ಸಂದೇಶ ಕಳುಹಿಸಿದ್ದಾನೆ. ತಾನು ಈ ರೀತಿ ಸೂಸೈಡ್ ಮಾಡಿಕೊಳ್ಳುತ್ತಿರುವುದನ್ನು ಮನೆಯವರಿಗೆ ತಿಳಿಸುವಂತೆ ತನ್ನ ಸ್ನೇಹಿತರಿಗೆ ಹೇಳಿದ್ದಾನೆ. ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಪೊಲೀಸರು, ಅಗ್ನಿ ಶಾಮಕ ದಳ ಸಿಬ್ಬಂದಿ ಮೃತ ದೇಹ ಮೇಲೆತ್ತಿದ್ದಾರೆ. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಾವಿಯಲ್ಲಿ ಬಾರ್ ಉದ್ಯಮಿ ಶವವಾಗಿ ಪತ್ತೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *