‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಪೊಲೀಸ್ ಸರ್ಪವಾಗಲು

Public TV
1 Min Read

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಪುನೀತ್ ನಟನೆಯ ಕಟ್ಟಕಡೆಯ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕೂಡ ಇದಾಗಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ.

ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಮಾತ್ರವಲ್ಲ, 40 ಸಾವಿರಕ್ಕೂ ಅಧಿಕ ಅಭಿಮಾನಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಿರುವುದರಿಂದ ಪೊಲೀಸ್ ಬಂದೋಬಸ್ತ್ ಕೂಡ ಮಾಡಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುವುದಕ್ಕಾಗಿ ಬೆಂಗಳೂರು ಪೊಲೀಸರು ಭಾರೀ ಸಿದ್ದತೆಯನ್ನೇ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ʻಕಾಂತಾರʼ ಸಿನಿಮಾ ನೋಡದ ರಶ್ಮಿಕಾ ಮಂದಣ್ಣ ಬಗ್ಗೆ ಪ್ರಮೋದ್‌ ಶೆಟ್ಟಿ ಪ್ರತಿಕ್ರಿಯೆ

ಈ ಕುರಿತು ಮಾಹಿತಿ ನೀಡಿದ ಡಿಸಿಪಿ ಶ್ರೀನಿವಾಸ್ ಗೌಡ, 1400 ಪೊಲೀಸರ್, 180 ಪಿಎಸ್.ಐ, 60 ಇನ್ಸೆಪೆಕ್ಟರ್, 14 ಎಸಿಪಿ ಹಾಗೂ 3 ಮಂದಿ ಡಿಸಿಪಿಗಳನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲದೇ, 20 ಕೆ.ಎಸ್.ಆರ್ಪಿ ತುಕಡಿ ಕೂಡ ಆ ಸ್ಥಳದಲ್ಲಿ ಇರಲಿದೆ. ಕಾರ್ಯಕ್ರಮವನ್ನು ವೀಕ್ಷಿಸಲು ಬರುವ ಅಭಿಮಾನಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕೂಡ ಮಾಡಲಾಗಿದ್ದು, ಪಾಸ್ ಇದ್ದವರಿಗೆ ಪ್ರವೇಶವನ್ನು ಕಲ್ಪಿಸಲಾಗಿದೆ.

ಭಾರತೀಯ ಸಿನಿಮಾ ರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದರಿಂದ ಮತ್ತು ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾವಣೆಗೊಳ್ಳುವುದರಿಂದ ಈ ಪ್ರಮಾಣದಲ್ಲಿ ಭದ್ರತೆಯನ್ನು ಕಲ್ಪಿಸಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಅಲ್ಲದೇ, ಪಾರ್ಕಿಂಗ್ ಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲುವ ಮೂಲಕ ಟ್ರಾಫಿಕ್ ಜಾಮ್ ತಪ್ಪಿಸಲು ಕಸರತ್ತು ನಡೆಸಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *