ಟೀ ನಿರಾಕರಿಸಿದ ಡಿಸಿಗೆ ಮದ್ಯ ಕುಡಿತೀರಾ ಅಂದ ಮಹಾರಾಷ್ಟ್ರ ಕೃಷಿ ಸಚಿವ – ವೀಡಿಯೋ ವೈರಲ್

Public TV
2 Min Read

ಮುಂಬೈ: ಮಹಾರಾಷ್ಟ್ರದ ಕೃಷಿ ಸಚಿವ ಅಬ್ದುಲ್ ಸತ್ತಾರ್ (Maharashtra Agriculture Minister Abdul Sattar) ಅವರು ಜಿಲ್ಲಾಧಿಕಾರಿ ರಾಧಾಬಿನೋದ್ ಶರ್ಮಾ (Radhabinod Sharma) ಅವರಿಗೆ ಮದ್ಯಪಾನ ಮಾಡುತ್ತೀರಾ ಎಂದು ಕೇಳಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಮಧ್ಯ ಮಹಾರಾಷ್ಟ್ರದ (Maharashtra) ಬೀಡ್ ಜಿಲ್ಲೆಯ (Beed district) ಪ್ರವಾಸದಲ್ಲಿರುವಾಗ ಅಬ್ದುಲ್ ಸತ್ತಾರ್ ಅವರೊಂದಿಗೆ ಅಕ್ಟೋಬರ್ 21 ರಂದು ಜಿಲ್ಲೆಯ ಗೆವ್ರಾಯಿ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಬಗ್ಗೆ ಪರಿಶೀಲನೆ ನಡೆಸಲು ರಾಧಾಬಿನೋದ್ ಶರ್ಮಾ ಬಂದಿದ್ದರು. ಈ ವೇಳೆ ಚಹಾ ನೀಡಲು ಬಂದಾಗ ನಿರಾಕರಿಸಿದ್ದಕ್ಕೆ ರಾಧಾಬಿನೋದ್ ಶರ್ಮಾ ಮದ್ಯ ಸೇವಿಸುತ್ತೀರಾ ಎಂದು ಅಬ್ದುಲ್ ಸತ್ತಾರ್ ಅಣಕಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಗೆ ಒಂದು ದೇಶ, ಒಂದು ಸಮವಸ್ತ್ರ – ಕಲ್ಪನೆ ಪ್ರಸ್ತಾಪಿಸಿದ ಮೋದಿ

ಇದೀಗ ಈ ವೀಡಿಯೋ ವೈರಲ್ ಆಗುತ್ತಿದ್ದು, ವೀಡಿಯೋದಲ್ಲಿ ಅಬ್ದುಲ್ ಸತ್ತಾರ್, ರಾಧಾಬಿನೋದ್ ಶರ್ಮಾ ಮತ್ತು ಇನ್ನೂ ಕೆಲವರು ಕುಳಿತುರುವುದನ್ನು ಕಾಣಬಹುದಾಗಿದೆ. ಸದ್ಯ ಈ ವೀಡಿಯೋ ಕುರಿತಂತೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (Maharashtra Congress general secretary) ಸಚಿನ್ ಸಾವಂತ್ (Sachin Sawant), ಸತ್ತಾರ್ ಅವರದ್ದು ಮಳೆ ಹಾನಿ ಪರಿಶೀಲನೆ ಪ್ರವಾಸವೋ ಅಥವಾ ಮದ್ಯ ಸೇವಿಸಲು ಹೋಗಿರುವ ಪ್ರವಾಸವೋ ಎಂದು ಟ್ವೀಟ್ ಮಾಡಿದ್ದಾರೆ.  ಇದನ್ನೂ ಓದಿ: IPC, CRPC ಸುಧಾರಣೆಗೆ ಶೀಘ್ರದಲ್ಲೇ ನೂತನ ಕರಡು ಮಂಡನೆ – ಶಾ ಹೇಳಿಕೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *