ವಿಜಯದಶಮಿಯಂದು ನದಿಯಲ್ಲಿ ಈಜಲು ಹೋಗಿದ್ದ 17ರ ಹುಡುಗ ಸಾವು

Public TV
1 Min Read

ಹಾವೇರಿ: ವಿಜಯದಶಮಿ (Vijayadashami) ದಿನದಂದು ಇಲ್ಲಿನ ವರದಾ ನದಿಯಲ್ಲಿ (Varada River) ಈಜಲು ಹೋಗಿದ್ದ 17 ವರ್ಷದ ಹುಡುಗ ಸಾವನ್ನಪ್ಪಿರುವ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು ತಾಲ್ಲೂಕಿನ ಕಳಸೂರು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನ ಅಮೋಘ್‌ ಹೊಸಮನಿ (17) ಎಂದು ಗುರುತಿಸಲಾಗಿದೆ. ಹಬ್ಬದ (Festival) ಹಿನ್ನೆಲೆ ಅಮೋಘ್‌ ಸ್ನೇಹಿತರೊಂದಿಗೆ ವರದಾ ನದಿಗೆ ಸ್ನಾನಕ್ಕೆ ಬಂದಿದ್ದ. ಈ ವೇಳೆ ನದಿ ಮಧ್ಯ ಭಾಗಕ್ಕೆ ಹೋಗಿದ್ದು, ಈಜು ಬಾರದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಕಾಗೇರಿಗೊಂದು ನ್ಯಾಯ ಹೆಬ್ಬಾರ್‌ಗೊಂದು ನ್ಯಾಯ- ಸಿಡಿದೆದ್ದ ಹೆಬ್ಬಾರ್ ಅಭಿಮಾನಿಗಳು?

ಸ್ಥಳಕ್ಕೆ ಧಾವಿಸಿದ ಹಾವೇರಿ ಮತ್ತು ಸವಣೂರು ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಹುಡುಗನ ಮೃತದೇಹವನ್ನು ನದಿಯಿಂದ ಹೊರ ತೆಗೆದಿದ್ದಾರೆ. ಹುಡುಗನ ಮೃತದೇಹ ನೋಡುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲುಮಟ್ಟಿದೆ. ಸದ್ಯ ಸವಣೂರು ಪೊಲೀಸ್ (Savanur Police) ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದಸರಾ ಜಂಬೂ ಸವಾರಿಗೆ ಮೆರಗು ನೀಡಲಿವೆ 49 ವಿಶೇಷ ಸ್ತಬ್ಧ ಚಿತ್ರಗಳು – ಯಾವ್ಯಾವ ಜಿಲ್ಲೆಯಿಂದ ಏನೇನು?

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್