ವಿಷಕಾರಿ ಹಾವು ಕಚ್ಚಿ 27 ವರ್ಷದ ಯುವಕ ಸಾವು

Public TV
1 Min Read

ಧಾರವಾಡ: ವಿಷಕಾರಿ ಹಾವು (Poisonous Snake) ಕಚ್ಚಿ 27 ವರ್ಷದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ.

ಶ್ರಿರಾಮನಗರ (Shriram Nagar) ನಿವಾಸಿ ಚೇತನ್ (27) ಮೃತಪಟ್ಟ ಯುವಕ. ವಿಷಪೂರಿತ ಹಾವೊಂದು ಶ್ರಿರಾಮನಗರದ ತುಳಜಾ ಭವಾನಿ ದೇವಸ್ಥಾನದ ಬಳಿ ಬಂದಿತ್ತು. ಅದನ್ನು ಹಿಡಿಯುವ ಸಲುವಾಗಿ ಚೇತನ್ ಅದರ ಸಮೀಪ ಹೋಗಿದ್ದಾರೆ. ಈ ವೇಳೆ ಅವರಿಗೆ ಹಾವು ಕಚ್ಚಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಮೊಸಳೆ ದಾಳಿಗೆ ಬಾಲಕ ಬಲಿ – ಮೃತದೇಹಕ್ಕಾಗಿ ಹುಡುಕಾಟ

ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಾವು ಕಚ್ಚಿದ ತಕ್ಷಣ ಚೇತನ್ ಅವರನ್ನು ಧಾರವಾಡದ ಜಿಲ್ಲಾಸ್ಪತ್ರೆಗೆ ಸ್ಥಳೀಯರು ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಚೇತನ್ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

Share This Article