ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ಆಪೆರಿಕ್ಷಾಗೆ KSRTC ಬಸ್ ಡಿಕ್ಕಿ- ಇಬ್ಬರ ದುರ್ಮರಣ

Public TV
1 Min Read

ರಾಮನಗರ: ಆಪೆ ರಿಕ್ಷಾಗೆ ಕೆಎಸ್‍ಆರ್‍ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಪೆ ರಿಕ್ಷಾದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಬೆಂಗಳೂರು-ಮಾಗಡಿ ಹೆದ್ದಾರಿಯಲ್ಲಿ ಬರುವ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜ್ಯೋತಿ ಪಾಳ್ಯದ ಬಳಿ ಈ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ ರಘು, ಪರಮೇಶ್ವರ್ ಮೃತ ದುರ್ದೈವಿಗಳು.

ಬೆಂಗಳೂರಿನ ನಾಗರಬಾವಿಯಲ್ಲಿ ವಾಸವಾಗಿದ್ದ ಮೃತರಿಬ್ಬರು ಮಾಗಡಿಯಿಂದ ತರಕಾರಿ ಕೊಂಡು ಬೆಂಗಳೂರಿನಲ್ಲಿ ಮಾರಾಟ ಮಾಡ್ತಾ ಇದ್ರು ಎನ್ನಲಾಗಿದೆ. ಇಂದು ಬೆಳಿಗ್ಗೆ ಮಾಗಡಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿ ಮಾಡಿ ಬೆಂಗಳೂರಿಗೆ ಹೊರಟಿದ್ರು. ಆದ್ರೆ ಮಾಗಡಿಯ ಜ್ಯೋತಿ ಪಾಳ್ಯದ ಬಳಿ ಎದುರಿಗೆ ಬಂದ ಕೆಎಸ್ ಆರ್ ಟಿಸಿ ಬಸ್ – ಆಪೆ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ರಘು ಹಾಗೂ ಪರಮೇಶ್ ಮೃತಪಟ್ಟಿದ್ದಾರೆ.

ಮಾಗಡಿ ರಸ್ತೆಯ ಅಂಜನ್ ಥಿಯೇಟರ್ ಬಳಿ ಚಲಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಬಿಎಂಟಿಸಿ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗೊಂಡಿರೂ ಘಟನೆ ಕೂಡ ನಡೆದಿದೆ.

ಘಟನೆ ಸಂಬಂಧ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

 

 

Share This Article
Leave a Comment

Leave a Reply

Your email address will not be published. Required fields are marked *