ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರು

Public TV
1 Min Read

ಚಾಮರಾಜನಗರ: ಬೈಕ್ ಸವಾರನೊಬ್ಬ (Bike Rider) ಕಾಡಾನೆಗಳ ದಾಳಿಯಿಂದ (Wild Elephant Attack) ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಬಂಡೀಪುರದಲ್ಲಿ (Bandipur) ನಡೆದಿದೆ.

ಬಂಡೀಪುರ – ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಊಟಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರನಿಗೆ ಕಾಡಾನೆ ಎದುರಾಗಿದ್ದು, ಏಕಾಏಕಿ ದಾಳಿ ನಡೆಸಲು ಮುಂದಾಗಿದೆ. ಇದರಿಂದ ಗಾಬರಿಗೊಂಡ ಬೈಕ್ ಸವಾರ ಬೈಕ್ ಬಿಟ್ಟು ಕಾಡಿನತ್ತ ಓಡುವಾಗ ಮತ್ತೆ ಕಾಡಾನೆಗಳ ಹಿಂಡಿನೊಳಗೆ ಸಿಲುಕಿದ್ದಾನೆ. ಇದನ್ನೂ ಓದಿ: ಮಂಡ್ಯ To ಇಂಡಿಯಾ ಉದ್ಯೋಗ ಮೇಳ ಯಶಸ್ವಿ – 1,100 ಮಂದಿಗೆ ಉದ್ಯೋಗ

ಅದೃಷ್ಟವಶಾತ್ ಕಾಡಾನೆಗಳು ದಾಳಿ ಮಾಡದೆ ಕಾಡಿನೊಳಗೆ ತೆರಳಿವೆ. ಈ ಎಲ್ಲಾ ದೃಶ್ಯಗಳನ್ನು ಸಮೀಪದಲ್ಲೇ ಇದ್ದ ವಾಹನ ಸವಾರರು ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: Jharkhand Election | 70 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ಜೆಎಂಎಂ ಮೈತ್ರಿಕೂಟ ಸ್ಪರ್ಧೆ ಫಿಕ್ಸ್‌

Share This Article