ದಾವಣಗೆರೆ | ಆಟ ಆಡುವಾಗ ಭದ್ರಾ ನಾಲೆಗೆ ಬಿದ್ದು ಕೊಚ್ಚಿ ಹೋದ ಬಾಲಕ

Public TV
1 Min Read

ದಾವಣಗೆರೆ: ಬಾಲಕನೊಬ್ಬ ಆಟ ಆಡುವಾಗ ಭದ್ರಾ ನಾಲೆಗೆ (Bhadra Canal) ಬಿದ್ದು ಕೊಚ್ಚಿಕೊಂಡು ಹೋದ ಘಟನೆ ದಾವಣಗೆರೆ (Davanagere) ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಆವರಗೆರೆ ಗೋಶಾಲೆ ನಿವಾಸಿ ಷಣ್ಮುಖಾಚಾರಿ ಎಂಬವರ ಪುತ್ರ ಮನೋಜ್ (9) ಎಂದು ಗುರುತಿಸಲಾಗಿದೆ. ಬಾಲಕ 3ನೇ ತರಗತಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಬಾಲಕ ಆಟೋ ತೊಳೆಯಲೆಂದು ಸಂಬಂಧಿಯೊಬ್ಬರ ಜೊತೆ ನಾಲೆ ಬಳಿ ಬಂದಿದ್ದ. ಇದನ್ನೂ ಓದಿ: ಹಾಸನ | ಸಲೂನ್‌ಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ಆರೋಪ – ಪ್ರಕರಣ ದಾಖಲು

ಅಗ್ನಿಶಾಮಕದಳ ಹಾಗೂ ಈಜುಗಾರರ ಮೂಲಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸತತ ಕಾರ್ಯಾಚರಣೆ ಮಾಡಿದರು ಮನೋಜ್ ಮೃತದೇಹ ಪತ್ತೆಯಾಗಿದೆ.

ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದಾವಣಗೆರೆ | ದೇಶಾದ್ಯಂತ ಹಲವರ ಖಾತೆಗಳಿಂದ 150 ಕೋಟಿ ಎಗರಿಸಿದ್ದ ಸೈಬರ್‌ ವಂಚಕ ಅರೆಸ್ಟ್‌

Share This Article