Tumakuru| ರಸ್ತೆಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಕಾರು ಡಿಕ್ಕಿ – ತಂದೆ, ಮಗ ಸ್ಥಳದಲ್ಲೇ ಸಾವು

Public TV
1 Min Read

– ಪತ್ನಿ ಸ್ಥಿತಿ ಗಂಭೀರ

ತುಮಕೂರು: ರಸ್ತೆಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ (Cement Bulker Lorry) ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆ ಶಿರಾ (Sira) ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ನಡೆದಿದೆ.

ಗುರುರಾಜು (35), ಪುತ್ರ ರಿಷಾಂಕ್(2) ಮೃತ ದುರ್ದೈವಿಗಳು. ಮುಂಡರಿಗಿಯಿಂದ ಬೆಂಗಳೂರು ಕಡೆಗೆ ಕ್ವಿಡ್ ಕಾರಿನಲ್ಲಿ ಬರುವಾಗ ಅಪಘಾತ ಸಂಭವಿಸಿದೆ. ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಹರ್ಷಿತಾ (28) ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಬಿರೇನ್‌ ಸರ್ಕಾರಕ್ಕೆ ಸಂಕಷ್ಟ – ಬಿಜೆಪಿಯ 37ರ ಪೈಕಿ 17 ಶಾಸಕರು ಸಭೆಗೆ ಗೈರು

ಗಾಯಾಳುವನ್ನು ಶಿರಾ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರ ಬೆಳಗ್ಗೆ 6:30ರ ಸುಮಾರಿಗೆ ಘಟನೆ ನಡೆದಿದೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಆಹಾರ ಸುರಕ್ಷತಾ ಇಲಾಖೆಯಿಂದ ರಾಜ್ಯದ 127 ಪಿಜಿಗಳಿಗೆ ನೋಟಿಸ್ – 4 ಪಿಜಿಗಳಿಗೆ ದಂಡ

Share This Article