ಹೈಸ್ಕೂಲ್‌ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತ – ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ

Public TV
1 Min Read

ಗದಗ: ಹೈಸ್ಕೂಲ್‌ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು, ರಸ್ತೆ ಪಕ್ಷದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಮಹಮ್ಮದ್ ಮುಜಾವರ್ (16), ಸಂಜೀವ್ ಗಿರಡ್ಡಿ (16) ಮೃತಪಟ್ಟಿದ್ದಾರೆ. ಆಶಿಸ್ ಗುಂಡುರ್ (16) ಸೇರಿದಂತೆ ಮತ್ತೋರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಅಕ್ರಮ ಕಸಾಯಿಖಾನೆ ಮೇಲೆ ಕೆರೂರು ಪೊಲೀಸರ ದಾಳಿ, ಪ್ರಕರಣ ದಾಖಲು

ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ತಡರಾತ್ರಿ ಬರುವ ವೇಳೆ ಅಪಘಾತ ಸಂಭವಿಸಿದೆ. ನಾಲ್ಕು ಜನ ವಿದ್ಯಾರ್ಥಿಗಳು ಮಾತ್ರ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಗ್ಯಾದರಿಂಗ್ ಡ್ಯಾನ್ಸ್ ಮುಗಿಸಿಕೊಂಡು ಜೋಶ್‌ನಲ್ಲಿ ವಾಪಸ್‌ ಆಗುತ್ತಿದ್ದರು. ಅತಿಯಾದ ವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.

ಮೃತರ ದೇಹಗಳು ಹಾಗೂ ಓರ್ವ ಗಾಯಾಳು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮತ್ತೋರ್ವ ಗಾಯಾಳು ವಿದ್ಯಾರ್ಥಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ – 2 ದಶಕಗಳಿಂದ ಬಗೆಹರಿಯದ ಸಮಸ್ಯೆ!

Share This Article