ಮೋದಿ ಯುವಜನರನ್ನ ಸ್ವಾವಲಂಬಿಗಳಾಗಿ ಮಾಡಿದ್ರೆ, ಕಾಂಗ್ರೆಸ್‌ 3 ಸಾವಿರ ಕೊಡ್ತೀನಿ ಅಂತಿದೆ – ತೇಜಸ್ವಿ‌ ಸೂರ್ಯ

Public TV
2 Min Read

ಬೆಂಗಳೂರು: `ಯುವಕ್ರಾಂತಿ’ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ (Rahul Gandhi) 2 ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ (Unemployment) ಪದವೀಧರರಿಗೆ 3 ಸಾವಿರ ರೂ. ಹಾಗೂ ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡುವ `ಯುವನಿಧಿ’ (YuvaNidhi) ಯೋಜನೆಯನ್ನ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ಘೋಷಣೆ ಮಾಡಿರುವ 4ನೇ ಗ್ಯಾರಂಟಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi_Surya) ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ.: ಕಾಂಗ್ರೆಸ್‌ 4ನೇ ಗ್ಯಾರಂಟಿ ಘೋಷಣೆ

`ಒಂದೆಡೆ ಪ್ರಧಾನಿ ನರೇಂದ್ರ ಮೋದಿ (NarendraModi) ಅವರು, ಸ್ಟಾರ್ಟ್ಅಪ್, ಡಿಜಿಟಲ್ ಇಂಡಿಯಾ (Digital India), ಮುದ್ರಾ ಮತ್ತು ಇನ್ನಿತರ ಯೋಜನೆಗಳಿಂದ ಯುವಜನರನ್ನು ಸ್ವಾವಲಂಭಿಗಳಾಗಿ ಮಾಡಲು ಪ್ರಯತ್ನಿಸುತ್ತಿದ್ದರೇ, ಇನ್ನೊಂದೆಡೆ ರಾಹುಲ್‌ಗಾಂಧಿ ಅವರು 3 ಸಾವಿರ ರೂ. ಭತ್ಯೆ ಕೊಡುವ ಮಹಾನ್ ಯೋಜನೆಯನ್ನು ಕರ್ನಾಟಕದ ಯುವಜನತೆಗೆ ಘೋಷಿಸುತ್ತಿರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇಂದಿನ ಆಶಾದಾಯಿ ಯುವ ಪೀಳಿಗೆಯಿಂದ ಕಾಂಗ್ರೆಸ್ ಪಕ್ಷ ಎಷ್ಟು ದೂರ ಸರಿದಿದೆ ಎಂಬುದಕ್ಕೆ ಇದು ನಿದರ್ಶನ. ದೇಶದ ಆಶಾದಾಯಕ, ಭರವಸೆಯ ಯುವಜನತೆಗೆ ನಿರುದ್ಯೋಗಿ ಕಾಂಗ್ರೆಸ್ ಪಕ್ಷವು ಮಾಡುತ್ತಿರುವ ದ್ರೋಹ ಅಕ್ಷಮ್ಯ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಲಕ್ಷ ಯುವಕರಿಗೆ ಉದ್ಯೋಗ – ರಾಹುಲ್ ಗಾಂಧಿ ಭರವಸೆ

ಈಗಾಗಲೇ ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್ ವಿದ್ಯುತ್ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡುವುದಾಗಿ ಘೋಷಿಸಿರುವ ಕಾಂಗ್ರೆಸ್ ತನ್ನ 4ನೇ ಗ್ಯಾರಂಟಿಯಾಗಿ `ಯುವನಿಧಿ’ ಯೋಜನೆಯನ್ನ ಘೋಷಣೆ ಮಾಡಿದೆ.

Share This Article
Leave a Comment

Leave a Reply

Your email address will not be published. Required fields are marked *