ಬೆಂಗಳೂರಿನಲ್ಲಿ ವೈದ್ಯ ನೇಣು ಬಿಗಿದು ಆತ್ಮಹತ್ಯೆ

By
1 Min Read

ಬೆಂಗಳೂರು: ಮಂಡ್ಯ ಡಿಹೆಚ್‌ಒ (DHO) ಕಿರುಕುಳದಿಂದ ಬೇಸತ್ತ ವೈದ್ಯರೊಬ್ಬರು (Doctor) ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಮಹಾಲಕ್ಷ್ಮಿ ಲೇಔಟ್‌ನಲ್ಲಿ (Mahalakshmi Layout) ನಡೆದಿದೆ.

- Advertisement -

ನಟರಾಜ್ ಆತ್ಮಹತ್ಯೆಗೆ ಶರಣಾದ ವೈದ್ಯ. ಇವರು ಮಂಡ್ಯ (Mandya) ಆರೋಗ್ಯ ಇಲಾಖೆಯ ವೆಲ್‌ಫೇರ್ ಆಫೀಸರ್ (Welfare Officer) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಭ್ರೂಣ ಹತ್ಯೆ ಕುರಿತು ನರ್ಸ್ ಮಂಜುಳ ಸ್ಫೋಟಕ ಮಾಹಿತಿ

- Advertisement -

- Advertisement -

ಹೃದಯಾಘಾತಕ್ಕೊಳಗಾದ ಹಿನ್ನೆಲೆ ಕಳೆದ ಕೆಲ ದಿನಗಳಿಂದ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಗೆ ಹೋಗಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್‌ಒ ಇವರಿಗೆ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದು, ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ರೆಸ್ಟೋರೆಂಟಲ್ಲಿ ಕೈ ತೊಳೆದು ಬರುವಷ್ಟರಲ್ಲಿ ಪಿಎಸ್‌ಐ ಪಿಸ್ತೂಲ್ ಮಂಗಮಾಯ!

- Advertisement -

ಬೆಟ್ಟಸ್ವಾಮಿ ಎಂಬ ಅಧಿಕಾರಿಯನ್ನು ಪಾಂಡವಪುರ ಟಿಹೆಚ್‌ಒ ಆಗಿ ವರ್ಗಾವಣೆ ಮಾಡಲಾಗಿತ್ತು. ಆದರೆ ಬೆಟ್ಟಸ್ವಾಮಿ ಪಾಂಡವಪುರದಲ್ಲಿ ರಿಪೋರ್ಟ್ ಮಾಡಿಕೊಂಡಿರಲಿಲ್ಲ. ಡಿಹೆಚ್‌ಒ ಬೆಟ್ಟಸ್ವಾಮಿ ಪರವಾಗಿ ಇದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: 900 ಭ್ರೂಣಗಳ ಹತ್ಯೆ ಆರೋಪಕ್ಕೆ ಅಂಜಿ ವಿಷದ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡ್ರಾ ವೈದ್ಯ?

Share This Article