ದೇವರಿಗೆ ಪ್ರಾಣಿ ಬಲಿ ಕೊಡಲು ಹೋಗಿ ಕುಡಿದ ಮತ್ತಿನಲ್ಲಿ ನರ ಬಲಿ ಕೊಟ್ಟ!

Public TV
1 Min Read

ಕೋಲಾರ: ದೇವರಿಗೆ ಪ್ರಾಣಿ ಬಲಿ ಕೊಡುವಾಗ ಯಡವಟ್ಟು ಮಾಡಿರುವ ಕುಡುಕನೊಬ್ಬ ಮೇಕೆ ತಲೆ ಕಡಿಯುವ ಬದಲಿಗೆ ಯುವಕನ ಕತ್ತು ಕತ್ತರಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಕೋಲಾರದ ಗಡಿ ಅಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಲಸನಪಲ್ಲಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಗಾಂಜಾ ಮಾರುತ್ತಿದ್ದ ಪೊಲೀಸರನ್ನು ಅರೆಸ್ಟ್ ಮಾಡಿದ್ದ ಇನ್‌ಸ್ಪೆಕ್ಟರ್ ಸಸ್ಪೆಂಡ್

ಸುರೇಶ್ (32) ಬಲಿಪಶುವಾದ ಯುವಕ. ಮೇಕೆ ಹಿಡಿದುಕೊಂಡಿದ್ದ ಸ್ನೇಹಿತನ ಕತ್ತು ಕತ್ತರಿಸಿರುವ ಕುಡುಕ ಚಲಪತಿ, ಪೊಲೀಸರ ಅತಿಥಿಯಾಗಿದ್ದಾನೆ. ಈತ ಕುಡಿದ ಮತ್ತಿನಲ್ಲಿ ಮೇಕೆ ತಲೆ ಬದಲಿಗೆ ತನ್ನ ಸ್ನೇಹಿತನ ತಲೆಯನ್ನೇ ಕತ್ತರಿಸಿದ್ದಾನೆ.

POLICE JEEP

ಯಲ್ಲಮ್ಮನಿಗೆ ಪ್ರತಿ ವರ್ಷ ಜಾತ್ರೆಯಲ್ಲಿ ಬಲಿ ಕೊಡುವುದು ಗ್ರಾಮದ ಸಂಪ್ರದಾಯ. ಅದರಂತೆ ಈ ವರ್ಷವೂ ಮೇಕೆ ಕತ್ತರಿಸಲು ಗ್ರಾಮಸ್ಥರು ಮುಂದಾಗಿದ್ದರು. ಮೇಕೆ ಹಿಡಿದುಕೊಂಡಿದ್ದ ಸುರೇಶ್ ತಲೆಯನ್ನು ಕತ್ತರಿಸಿರುವ ಚಲಪತಿ, ಗ್ರಾಮಾಂತರ ಪೊಲೀಸರ ಅತಿಥಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಸೀದಿಯನ್ನು ಒಡೆದು ಹಾಕಿ ಎಂದ ಕಾಳಿ ಸ್ವಾಮೀಜಿಗೆ ಷರತ್ತು ಬದ್ಧ ಜಾಮೀನು

Share This Article
Leave a Comment

Leave a Reply

Your email address will not be published. Required fields are marked *