ಸಾಲ ತೀರಿಸುವಂತೆ ಬ್ಯಾಂಕ್‍ ನಿಂದ ನೋಟಿಸ್- ಹೃದಯಾಘಾತವಾಗಿ ರೈತ ಸಾವು

Public TV
0 Min Read

ತುಮಕೂರು: ಸಾಲ ತೀರಿಸುವಂತೆ ಬ್ಯಾಂಕ್ ನವರು ಕಳಿಸಿದ ನೋಟಿಸ್ ನೋಡಿ ಹೃದಯಾಘಾತಕ್ಕೊಳಗಾಗಿ ರೈತರೊಬ್ಬರು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ಜಿಲ್ಲೆಯ ಶಿರಾ ತಾಲೂಕಿನ ಎಂ. ದಾಸರಹಳ್ಳಿಯ 65 ವರ್ಷದ ಬಡಯ್ಯ ಮೃತ ರೈತ. ವಿವಿಧ ಬ್ಯಾಂಕ್ ಗಳಲ್ಲಿ 6 ಲಕ್ಷ ರೂಪಾಯಿಗೂ ಹೆಚ್ಚು ಸಾಲ ಮಾಡಿದ್ದರು. ಆದರೆ ಬೆಳೆ ಹಾಳಾಗಿ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ.

ಸೋಮವಾರ ಮಧ್ಯಾಹ್ನ ಬಡಯ್ಯನಿಗೆ ಸಾಲ ತೀರಿಸುವಂತೆ ಬ್ಯಾಂಕಿನಿಂದ ನೋಟಿಸ್ ಬಂದಿತ್ತು. ಅದನ್ನು ನೋಡಿ ಹೃದಯಾಘಾತಕ್ಕೆ ಒಳಗಾಗಿದ್ದರು. ಬಡಯ್ಯ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *