ವಿಜಯಪುರ | ಧಾರಾಕಾರ ಮಳೆಗೆ ನೆಲಕ್ಕುರುಳಿದ ಬೃಹತ್ ಮರ

Public TV
0 Min Read

ವಿಜಯಪುರ: ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೃಹತ್ ಮರವೊಂದು ನೆಲಕ್ಕುರುಳಿದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಗಾಂಧಿಚೌಕ್‌ಗೆ  (Gandhi Chowk) ಹೋಗುವ ಮಾರ್ಗದಲ್ಲಿ ನಡೆದಿದೆ.

ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಗುರುವಾರ (ಸೆ.11) ತಡರಾತ್ರಿ ಬೃಹತ್ ಮರವೊಂದು ನೆಲಕ್ಕುರುಳಿದೆ. ರಾತ್ರಿ ಧರೆಗುರುಳಿದ ಪರಿಣಾಮ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಇದನ್ನೂ ಓದಿ: 4 ಶಂಕಾಸ್ಪದ ಸಾವುಗಳ ತನಿಖೆಗೆ ತಿಮರೋಡಿ ದೂರು, ವಿಠಲಗೌಡ ಆರೋಪವನ್ನು ಎಸ್‌ಐಟಿ ಪರಿಶೀಲಿಸಿ ಕ್ರಮ: ಪರಮೇಶ್ವರ್

ಮರ ಬಿದ್ದ ರಭಸಕ್ಕೆ ಎರಡು, ಮೂರು ಅಂಗಡಿಗಳು ಜಖಂ ಆಗಿವೆ. ಜೊತೆಗೆ ವಿದ್ಯುತ್ ಕಂಬಗಳಿಗೂ ಹಾನಿಯಾಗಿದ್ದು, ವೈರ್ ಕಡಿತಗೊಂಡಿದೆ.

Share This Article