ಕೆಜಿಎಫ್ ಸಿನಿಮಾ ಟಿಕೆಟ್‍ಗಾಗಿ ಥಿಯೇಟರ್ ಸಿಬ್ಬಂದಿಯ ಕೈ ಬೆರಳನ್ನೇ ಕಟ್ ಮಾಡ್ದ!

Public TV
1 Min Read

ಬೆಂಗಳೂರು: ಕೆಜಿಎಫ್ ಸಿನಿಮಾ ಟಿಕೆಟ್‍ಗಾಗಿ ವ್ಯಕ್ತಿಯೊಬ್ಬ ಥಿಯೇಟರ್ ಸಿಬ್ಬಂದಿಯ ಕೈ ಬೆರಳನ್ನೇ ಕಟ್ ಮಾಡಿರುವ ಶಾಕಿಂಗ್ ಘಟನೆ ನಗರದ ವೀರೇಶ್ ಚಿತ್ರಮಂದಿರದ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಾಗಡಿ ರಸ್ತೆಯ ವೀರೇಶ್ ಚಿತ್ರ ಮಂದಿರದ ಸಿಬ್ಬಂದಿ ಅರವಿಂದ್ ಎಂಬವರ ಬಳಿ ಬ್ಲ್ಯಾಕ್ ಟಿಕೆಟ್ ಮಾರಾಟಗಾರ ರಮೇಶ್ (35) ಎಂಬಾತ ಟಿಕೆಟ್ ಕೊಡಿಸುವಂತೆ ಕೇಳಿದ್ದಾನೆ. ಆದರೆ ಸಿಬ್ಬಂದಿ ಆತನಿಗೆ ಟಿಕೆಟ್ ಕೊಡಿಸಲು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಆತ, ಸಿಬ್ಬಂದಿ ಮೇಲೆ ಜಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಸಿಬ್ಬಂದಿ ಅರವಿಂದ್ ಅವರ ಎಡಗೈ ಬೆರಳು ಕಟ್ ಆಗಿದೆ. ಹಾಗೇ ಅವರ ಬಲಗೈಗೆ ಗಂಭೀರ ಗಾಯಗಳಾಗಿದೆ.

ಅರವಿಂದ್‍ಗೆ ತೀವ್ರ ರಕ್ತಸ್ರಾವವಾದ ಹಿನ್ನಲೆಯಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅರವಿಂದ್ ಗುಣಮುಖರಾಗಿದ್ದಾರೆ. ಘಟನೆ ಕುರಿತು ಅರವಿಂದ್ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಟಿಕೆಟ್ ನೀಡಲು ನಿರಾಕರಿಸಿದ ಕಾರಣ ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಆತನಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಗಾಯಗೊಂಡಿದ್ದಾಗಿ ಮಾಹಿತಿ ನೀಡಿದ್ದು, ವಿಜಯನಗರ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದು, ಡಿಸೆಂಬರ್ 17ರಂದು ಘಟನೆ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *