ಮದ್ವೆಯಾದ್ರೂ ಹಳೆ ಲವರ್ ಜೊತೆ ಟಚ್-ಗೆಳೆಯರಿಗೆ ಪತ್ರ ಬರೆದು ಪ್ರೇಯಸಿಯೊಂದಿಗೆ ಆತ್ಮಹತ್ಯೆ

Public TV
1 Min Read

ಬೆಂಗಳೂರು: ಪ್ರೇಮಿಗಳಿಬ್ಬರು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ರಾಮಮೂರ್ತಿ ನಗರ ಮಂಜುನಾಥ ಬಡಾವಣೆಯಲ್ಲಿ ನಡೆದಿದೆ.

ಮೂಲತಃ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನಾಗೇಶ್ ಹಾಗೂ ಮುಗಳಬೆಲೆ ಗ್ರಾಮದ ಭಾರತಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಮೃತ ನಾಗೇಶ್ ಆಡುಗೊಡಿಯ ಬಾಷ್ ಕಂಪೆನಿಯಲ್ಲಿ ಟೆಕ್ನಿಷಿಯನ್ ಕೆಲಸ ಮಾಡುತ್ತಿದ್ದರು.

ಏನಿದು ಪ್ರಕರಣ: ನಾಗೇಶ್ ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿ ಭಾರತಿಯನ್ನು ಪ್ರೀತಿ ಮಾಡಿ ಮದುವೆ ಮಾಡಿಕೊಂಡಿದ್ದರು. ಆದರೆ ಇವರಿಬ್ಬರ ಮದುವೆಗೆ ಸಮ್ಮತಿಸದ ಪೋಷಕರು ಬೇರೊಂದು ಯುವತಿಯೊಂದಿಗೆ ಮದುವೆ ಮಾಡಿದ್ದರು. ಬಳಿಕ ಇಬ್ಬರಿಗೂ ಒಂದು ಮಗುವು ಜನಿಸಿತ್ತು. ಆದರೆ ಮದುವೆ ಮುನ್ನ ಪ್ರೀತಿಸುತ್ತಿದ್ದ ಭಾರತಿಯೊಂದಿಗೆ ನಾಗೇಶ್ ತನ್ನ ಪ್ರೀತಿಯನ್ನು ಮುಂದುವರೆಸಿದ್ದ ಎನ್ನಲಾಗಿದೆ.

ಆತ್ನಹತ್ಯೆಗೂ ಮುನ್ನ ಪತ್ರ ಬರೆದಿಟ್ಟಿರುವ ನಾಗೇಶ್ ಫೋನ್ ಮೂಲಕ ತನ್ನ ಗೆಳೆಯರಿಗೆ ಪತ್ರವನ್ನು ರವಾನಿಸಿದ್ದಾರೆ. ಪತ್ರದಲ್ಲಿ ತನ್ನ ಪ್ರೇಮಿಯನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ ಅದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದು, ತನ್ನ ಪತ್ನಿಗೆ ಆಕ್ರಮ ಸಂಬಂಧ ಇದ್ದು, ಮಾವನಿಂದ ಕಿರುಕುಳ ಇತ್ತು ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಸದ್ಯ ಕುರಿತು ಮಾಹಿತಿ ಪಡೆದಿರುವ ಕೆಆರ್ ಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ನಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *