ಸಿಎಂ ಮನೆಗೆ ಕಲ್ಲೆಸೆತ; ವ್ಯಕ್ತಿ ಪೊಲೀಸ್ ವಶಕ್ಕೆ

Public TV
1 Min Read

ಮೈಸೂರು: ಇಲ್ಲಿನ ಟಿ.ಕೆ. ಬಡಾವಣೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ಕಲ್ಲೆಸೆದಿರುವ ಘಟನೆ ನಡೆದಿದೆ. ಕಲ್ಲೆಸೆದ ವ್ಯಕ್ತಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರಿನ (Mysuru) ಸತ್ಯಮೂರ್ತಿ ಎಂಬಾತ ಕಲ್ಲೆಸೆದ ವ್ಯಕ್ತಿ. ಮಂಗಳವಾರ ಬೆಳಗ್ಗೆ ಈತ ಸಿಎಂ ಮನೆಗೆ ಕಲ್ಲೆಸೆದಿದ್ದ. ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೆಹಲಿ ಕಾಂಗ್ರೆಸ್‌ನವರು ಬೈದಿದ್ದಕ್ಕೆ ಪ್ರದೀಪ್ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿರೋದು: ಸುಧಾಕರ್

ಆರೋಪಿ ಸತ್ಯಮೂರ್ತಿ ನಿನ್ನೆಯಷ್ಟೇ ಸಿಎಂ ಮನೆಗೆ ಬಂದಿದ್ದ. ಭಾನುವಾರ ಸಿಎಂ ಮೈಸೂರಿನ ಮನೆಯಲ್ಲಿದ್ದ ವೇಳೆ ಸಿಎಂ ಭೇಟಿಗೆ ಬಂದಿದ್ದ. ಸಿಎಂ ಭೇಟಿಗೆ ಬಂದಿದ್ದನ್ನ ತಾನೇ ಸೆಲ್ಫಿ ವೀಡಿಯೋ ಸಹ ಮಾಡಿದ್ದ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ಯಂತ್ರ ಒಡೆದು ಹಾಕಿದ್ದು ಇದೇ ಸತ್ಯಮೂರ್ತಿ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಫೋಟೋಗೆ ರೌಡಿ ರಾಜೇಂದ್ರ ಎಂದು ಪೋಸ್ಟ್ ಕೂಡ ಮಾಡಿದ್ದ. ಈತ ಮಾನಸಿಕ ಅಸ್ವಸ್ಥ ಎಂದು ಈ ಹಿಂದೆ ಹೇಳಲಾಗಿತ್ತು. ಘಟನೆ ಸಂಬಂಧ ಪೊಲೀಸರಿಂದ ತೀವ್ರ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಮಾಜಿ ಸಿಎಂಗಳಿಗೆ ಮತ್ತೆ Z ಭದ್ರತೆ ನೀಡಲು ಸರ್ಕಾರ ನಿರ್ಧಾರ

ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಇವಿಎಂ ಯಂತ್ರ ಒಡೆದ ದೃಶ್ಯ ಬಳಸಿ ಜೈಲರ್ ಸಿನಿಮಾ ಹಾಡನ್ನ ಮಿಕ್ಸ್ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ಪೋಸ್ ಕೊಟ್ಟಿದ್ದ. ತನ್ನ ಅವಾಂತರಗಳಿಗೆ ತಾನೇ ಬಿಲ್ಡಪ್ ಕೊಟ್ಟುಕೊಳ್ಳುತ್ತಿದ್ದ ಆರೋಪಿ ಸತ್ಯಮೂರ್ತಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿ, ವಶಕ್ಕೆ ಪಡೆದಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್