ಕಾರವಾರ| ಯಾರೂ ಇಲ್ಲದ ವೇಳೆ ಮನೆಗೆ ಬೆಂಕಿ ಇಟ್ಟ ದುಷ್ಕರ್ಮಿ

1 Min Read

ಕಾರವಾರ: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಗೆ ದುಷ್ಕರ್ಮಿಯೊಬ್ಬ ಬೆಂಕಿ ಇಟ್ಟಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ದೇವರ ಹಕ್ಕಲದಲ್ಲಿ ನಡೆದಿದೆ.

18ರ ಹುಡುಗ ಈ ಕೃತ್ಯ ಎಸಗಿದ್ದಾರೆ. ದಿನಕರ್ ಎಂಬವರಿಗೆ ಸೇರಿದ ಮನೆ ಇದಾಗಿದೆ. ಕುಮಟಾದ ವೆಂಕಟರಮಣ ದೇವರ ಜಾತ್ರೆಗೆ ದಿನಕರ್ ಕುಟುಂಬ ತೆರಳಿತ್ತು. ಈ ವೇಳೆ ಬೆಂಕಿ ಇಡಲಾಗಿದೆ. ಇದನ್ನೂ ಓದಿ: ಬಳ್ಳಾರಿ ಗಲಭೆ| ಸ್ಥಳ ನಿಯೋಜನೆ ಮಾಡದೇ ಡಿವೈಎಸ್ಪಿ ನಂದಾರೆಡ್ಡಿ ವರ್ಗಾವಣೆ

ಮನೆಗೆ ಬೆಂಕಿ ಹಚ್ಚುತ್ತಿದ್ದಂತೆ ನೆರೆಯವರು ಬೆಂಕಿ ನಂದಿಸಿದ್ದಾರೆ. ಆರೋಪಿಯನ್ನು ಕುಮಟಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಎಸ್‌ಪಿ ದೀಪನ್ , ಎಎಸ್‌ಪಿ ಜಗದೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮನೆ ಮಾಲೀಕ ದಿನಕರ್‌ಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ದೇವರ ಹಕ್ಕಲದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಕುಮಟಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಹೃದಯಾಘಾತಕ್ಕೆ ಪಿಯುಸಿ ವಿದ್ಯಾರ್ಥಿನಿ ಬಲಿ

Share This Article