ಜಮೀನಿನಲ್ಲಿ ಶೌಚ ಮಾಡಿದಕ್ಕೆ ಕೊಲೆಗೈದ್ರು!

Public TV
1 Min Read

ರಾಂಚಿ: ಜಮೀನಿನಲ್ಲಿ ಶೌಚ ಮಾಡಿದ ಅಂತಾ 45 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ, ಕೊಲೆಗೈದಿರುವ ಅಮಾನವೀಯ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ.

ಪಲಮು ಜಿಲ್ಲೆಯ ಸುಕ್ರಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಘಟನೆ ನಡೆದಿದೆ. ಮೃತ ವ್ಯಕ್ತಿಯ ಪುತ್ರ ಶುಕ್ರವಾರ ಸುಕ್ರಾ ಬಜಾರ್ ಠಾಣೆಯಲ್ಲಿ ದೂರ ದಾಖಲಿಸಿದ್ದಾರೆ. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಮಹೇಂದ್ರ ಮತ್ತು ಚೋಟುಕುಮಾರ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಏನಿದು ಪ್ರಕರಣ?:
ಮೃತ ವ್ಯಕ್ತಿ ಹಾಗೂ ಕೊಲೆಗೈದ ಆರೋಪಿಗಳು ಸಂಬಂಧಿಕರಾಗಿದ್ದು, ಇಬ್ಬರ ನಡುವೆ ಜಮೀನು ವಾಜ್ಯದ ವಿಚಾರವಾಗಿ ಈ ಹಿಂದೆಯೂ ಜಗಳವಾಗಿತ್ತು. ಶೌಚಕ್ಕೆಂದು ವ್ಯಕ್ತಿ ಗುರುವಾರ ಜಮೀನಿಗೆ ಹೋಗಿದ್ದ. ಇದನ್ನು ನೋಡಿ, ಅಲ್ಲಿಗೆ ಬಂದ ಆರೋಪಿಗಳು ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಈ ಕೃತ್ಯಕ್ಕೆ ಸಹಾಯ ಮಾಡಿದ್ದ ಮಹಿಳೆಯೊಬ್ಬಳು ಘಟನೆಯಲ್ಲಿ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಯಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *