ಗದಗ | ಬಿರಿಯಾನಿ ತಿನ್ನಲು ಹೋಟೆಲ್‌ಗೆ ಬಂದಾತನ ಭೀಕರ ಕೊಲೆ

By
1 Min Read

ಗದಗ: ಬಿರಿಯಾನಿ ತಿನ್ನಲು ಹೋಟೆಲ್‌ಗೆ ಬಂದಾತನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಗದಗ (Gadag) ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.

- Advertisement -

ಬಸವರಾಜ್ ಮಮ್ಮಟಗೇರಿ (22) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ನರಗುಂದ (Naragund) ಪಟ್ಟಣದಲ್ಲಿದ್ದ ತಾಜ್ ಹೋಟೆಲ್‌ಗೆ ಬಸವರಾಜ್ ಬಿರಿಯಾನಿ (Biriyani) ತಿನ್ನಲು ಬಂದಿದ್ದ. ಇದನ್ನೂ ಓದಿ: ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿಗೆ ಸಕಲೇಶಪುರ ಪ್ರವೇಶಕ್ಕೆ ನಿರ್ಬಂಧ

- Advertisement -

- Advertisement -

ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಬಸವರಾಜ್ ಕಣ್ಣಿಗೆ ಖಾರದಪುಡಿ ಮನಸೋ ಇಚ್ಛೆ ಹಲ್ಲೆ ಮಾಡಿ, ಹತ್ಯೆಗೈದು ಪರಾರಿಯಾಗಿದ್ದರು.

- Advertisement -

ಕೊಲೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ನರಗುಂದ ಡಿವೈಎಸ್ಪಿ ಪ್ರಭು ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article