ಕಾಂಗ್ರೆಸ್ ಬಿಟ್ಟು ತೆನೆ ಹೊತ್ತ ಎ.ಮಂಜು – ರೇವಣ್ಣ ವಿರುದ್ಧ ಎ.ಟಿ ರಾಮಸ್ವಾಮಿ ಬೇಸರದ ಮಾತು

Public TV
1 Min Read

ಹಾಸನ: ಜೆಡಿಎಸ್‍ (JDS) ನ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಹಾಲಿ ಇಬ್ಬರು ಶಾಸಕರು ಜೆಡಿಎಸ್‍ಗೆ ಗುಡ್‍ಬೈ ಹೇಳುವುದು ಬಹುತೇಕ ಖಚಿತವಾಗಿದೆ. ಈ ಮಧ್ಯೆ ಹಾಸನದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆದಿದೆ.

ಹಾಸನ ಜಿಲ್ಲೆ ಜೆಡಿಎಸ್‍ನಲ್ಲಿ ಅಚ್ಚರಿ ಬೆಳವಣಿಗೆ ನಡೆಯುತ್ತಿದೆ. ಹಾಸನ ಜಿಲ್ಲೆಯ ಅರಸೀಕೆರೆ, ಅರಕಲಗೂಡು ವಿಧಾನಸಭಾ ಕ್ಷೇತ್ರ (Arakalagudu vidhanasabha Constituency) ಗಳ ಹಾಲಿ ಶಾಸಕರುಗಳಾದ ಎ.ಟಿ.ರಾಮಸ್ವಾಮಿ (A.T Ramaswamy) ಹಾಗೂ ಕೆ.ಎಂ.ಶಿವಲಿಂಗೇಗೌಡ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ಮಧ್ಯೆ 2023ರ ಚುನಾವಣೆಯಲ್ಲಿ ಅರಕಲಗೂಡು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ಎ.ಮಂಜು (A Manju) ಅಂತ ಸ್ವತಃ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮತ್ತೊಂದೆಡೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಫೆ.14 ತಮ್ಮ ಹುಟ್ಟುಹಬ್ಬದ ದಿನದಂದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ 2 ವಿಕೆಟ್ ಪತನ- ಕಾಂಗ್ರೆಸ್ ಸೇರ್ತಾರಾ ಶಿವಲಿಂಗೇಗೌಡ, ಎಟಿಆರ್?

ಅರಕಲಗೂಡು ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಎ. ಮಂಜು ಕಣಕ್ಕಿಳಿಯಲಿದ್ದಾರೆ. ಅಲ್ಲದೇ ತಮ್ಮ ಮಗನನ್ನೂ ಜೆಡಿಎಸ್‍ಗೆ ಮಂಜು ಆಹ್ವಾನಿಸಿದ್ದಾರೆ. ಕಾಂಗ್ರೆಸ್ (Congress) ತೊರೆಯಲು ಪಕ್ಷದಲ್ಲಿನ ಕಡಗಣನೆ ಅಂತ ದೂರಿದ್ದಾರೆ. ಎ.ಮಂಜು ಜೆಡಿಎಸ್ ಸೇರ್ಪಡೆ ಬೆನ್ನಲ್ಲೇ ಅರಕಲಗೂಡು ಕ್ಷೇತ್ರದಲ್ಲಿ ಕೋಲಾಹಲ ಶುರುವಾಗಿದೆ. ಶಾಸಕ ಎ.ಟಿ.ರಾಮಸ್ವಾಮಿ ಎಚ್.ಡಿ.ರೇವಣ್ಣ ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಯಿಯೇ ತನ್ನ ಮಗುವಿಗೆ ಹಾಲು ಕೊಡದೆ ವಿಷ ಕೊಟ್ಟರೆ ಮಗು ಹೇಗೆ ಬದುಕುತ್ತೆ..? ನನ್ನ ನಡೆ ಬಗ್ಗೆ. ಜನರ ತೀರ್ಮಾನಕ್ಕೆ ಬಿಟ್ಟಿದ್ದೀನಿ ಅಂತ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.

ಜೆಡಿಎಸ್‍ನ ಭದ್ರಕೋಟೆಯಲ್ಲೇ ಹಾಲಿ ಶಾಸಕರು ಪಕ್ಷ ತೊರೆಯುತ್ತಿರುವುದು ಜೆಡಿಎಸ್ ನಾಯಕರಿಗೆ ದೊಡ್ಡ ತಲೆ ನೋವಾಗಿತ್ತು. ಆದರೆ ಅರಕಲಗೂಡು ಕ್ಷೇತ್ರಕ್ಕೆ ಎ.ಟಿ.ರಾಮಸ್ವಾಮಿ ತಂದಂತೆ, ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೂ ಅಚ್ಚರಿಯ ಅಭ್ಯರ್ಥಿ ಘೋಷಣೆ ಮಾಡ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *