ನಾಮಪತ್ರ ಸಲ್ಲಿಕೆಗೂ ಮುನ್ನ ಪೌರಕಾರ್ಮಿಕರ ಪಾದ ತೊಳೆದ ಮಂಜು!

Public TV
1 Min Read

ಹಾಸನ: ಇಂದು ಬಿಜೆಪಿ ಅಭ್ಯರ್ಥಿಯಾದ ಮಾಜಿ ಸಚಿವ ಎ.ಮಂಜು ಅವರು ನಾಮಪತ್ರ ಸಲ್ಲಿಕೆಗೂ ಮುನ್ನಾ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ದಂಪತಿಯ ಪಾದ ತೊಳೆದು ಪೂಜೆ ಮಾಡಿದ್ದಾರೆ.

ಈ ಹಿಂದೆ ಕುಂಭಮೇಳದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್‍ನಲ್ಲಿ ಪೌರಕಾಮಿಕರ ಪಾದ ತೊಳೆದು ಪೂಜೆ ಮಾಡಿ ಸುದ್ದಿಯಾಗಿದ್ದರು. ಈಗ ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬಂದಿರುವ ಎ. ಮಂಜು ಅವರು ಇಂದು ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ, ಪೌರಕಾರ್ಮಿಕ ದಂಪತಿಯ ಪಾದ ತೊಳೆದು ಪೂಜೆ ಮಾಡಿ ಮೋದಿ ಅವರನ್ನು ಫಾಲೋ ಮಾಡಿದ್ದಾರೆ. ಇದನ್ನೂ ಓದಿ:ಪ್ರಧಾನಿ ಮೋದಿಯಿಂದ ಪೌರಕಾರ್ಮಿಕರ ಪಾದಪೂಜೆ – ವಿಡಿಯೋ ನೋಡಿ

ಹಾಸನದ ನಿರ್ಮಾಲ ನಗರದಲ್ಲಿ ಚಂದ್ರು ಹಾಗೂ ಅಶ್ವಿನಿ ದಂಪತಿಯ ಕಾಲು ತೊಳೆದು ಎ.ಮಂಜು ಪೂಜೆ ಮಾಡಿದ್ದಾರೆ. ಪಾದ ತೊಳೆದ ನಂತರ, ನಾವು ಪೌರಕಾರ್ಮಿಕರ ಪಾದ ತೊಳೆದಿದ್ದ ಮೋದಿಯನ್ನು ಟಿವಿಯಲ್ಲಿ ಮಾತ್ರ ನೊಡಿದ್ದೇವು. ಅದರೇ ಇಂದು ಎ.ಮಂಜು ನಮ್ಮ ಮನೆಗೆ ಬಂದು ನಮ್ಮ ಪಾದ ತೊಳೆದಿದ್ದಾರೆ. ಮೊದಲು ಸ್ವಲ್ಪ ಮುಜುಗರವಾದರೂ ನಂತರ ಸಂತೋಷವಾಯಿತು ಎಂದ ಚಂದ್ರು ದಂಪತಿ ಪ್ರತಿಕ್ರಿಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *