ಕಸದ‌ ಬುಟ್ಟಿಯಲ್ಲಿ ನವಜಾತ ಶಿಶು ಪತ್ತೆ

Public TV
1 Min Read

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್‌ ಪಟ್ಟಣದಲ್ಲಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಪಟ್ಟಣದ ಮೇಗಳಪೇಟೆ ನಿರ್ಜನ ಪ್ರದೇಶದ ಕಸದ ರಾಶಿಯಲ್ಲಿ ನವಜಾತ ಗಂಡು ಶಿಶು ಕಳೆಬರ ಸಿಕ್ಕಿದೆ.

ಕಸದ‌ ರಾಶಿಯಲ್ಲಿ (Garbage) ಶಿಶುವನ್ನು (Baby) ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಶಿಶುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕರಳುಬಳ್ಳಿ ಸಹಿತ ಶಿಶುವನ್ನು ತಿಪ್ಪೆಯಲ್ಲಿ ಎಸೆಯಲಾಗಿದ್ದು, ಮಗು ಜನಿಸಿದ ಬಳಿಕ ಸಾವನ್ನಪ್ಪಿತ್ತಾ ಅಥವಾ ಜೀವಂತ ಶಿಶುವನ್ನೇ ಬಿಟ್ಟು ಹೋಗಿದ್ದರಾ ಅನ್ನೋ ಬಗ್ಗೆ ಮಾಹಿತಿಯಿಲ್ಲ. ತಿಪ್ಪೆಯಲ್ಲಿ ಬಿದ್ದಿದ್ದರಿಂದ ನಾಯಿಗಳು ಶಿಶುವಿನ ಕಾಲನ್ನು ಕಚ್ಚಿ ಗಾಯಗೊಳಿಸಿವೆ. ಇದನ್ನೂ ಓದಿ: ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ಶೃಂಗೇರಿಗೆ ಭೇಟಿ ನೀಡಲಿದ್ದಾರೆ ನಡ್ಡಾ

ಆಸ್ಪತ್ರೆಯಲ್ಲಿ (Hospital) ಜನಿಸಿದ್ದ ಮಗುವನ್ನು ಬೀಸಾಡಿರಬಹುದಾ ಅಂತ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಶುವನ್ನು ಬೀಸಾಡಿದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ನನ್ನ ಹತ್ಯೆಗೆ ಸುಪಾರಿ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ: ಸತೀಶ್ ರೆಡ್ಡಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *