ಕಂಠೀರವ ಸ್ಟುಡಿಯೋ ಆವರಣದಲ್ಲಿ 14 ಅಡಿ ಎತ್ತರದ ಅಂಬರೀಶ್ ಪ್ರತಿಮೆ

Public TV
1 Min Read

ರೆಬಲ್ ಸ್ಟಾರ್ ಅಂಬರೀಶ್ ಅವರ 14 ಅಡಿ ಕಂಚಿನ ಪ್ರತಿಮೆಯನ್ನು ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಅಂಬರೀಶ್ ಸಮಾಧಿ ಎದುರು ತಲೆಯತ್ತಲಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಂಬರೀಶ್ ಅವರ ಸ್ಮಾರಕಕ್ಕೆ ಶಂಕುಸ್ಥಾಪನೆ ಮಾಡಿ, 12 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸ್ಮಾರಕಕ್ಕೆ ಚಾಲನೆ ನೀಡಿದ್ದಾರೆ. ಮುಂದುವರೆಕೆಯಾಗಿ ಈ ಸ್ಥಳದಲ್ಲಿಯೇ ಅಂಬರೀಶ್ ಕಂಚಿನ ಪ್ರತಿಮೆಯಾಗಲಿದ್ದಾರೆ. ಇದನ್ನೂ ಓದಿ : ಉಪಗ್ರಹವಾದ ಪುನೀತ್ ರಾಜ್ ಕುಮಾರ್: 100 ಸಾಹಸಿ ಮಕ್ಕಳ ಕೆಲಸವಿದು

ಪಕ್ಕದಲ್ಲಿಯೇ ಡಾ.ರಾಜ್ ಕುಮಾರ್ ಅವರ ಸ್ಮಾರಕ ನಿರ್ಮಾಣವಾಗಿದೆ. ಒಂದಷ್ಟು ಅದೇ ಮಾದರಿಯನ್ನು ಅನುಸರಿಸಿ, ಮತ್ತಷ್ಟು ವಿಭಿನ್ನವಾಗಿ ಸ್ಮಾರಕ ಮಾಡುವ ಯೋಜನೆ ಸರಕಾರದ್ದು. ಕಂಚಿನ ಪ್ರತಿಮೆಗೆ ಹೊಂದಿಕೊಂಡಂತೆ ಕಾರಂಜಿ, ವಸ್ತು ಸಂಗ್ರಹಾಲಯ, ಬಯಲು ರಂಗಮಂದಿರ, ಅಂಬರೀಶ್ ಅವರ ಸಿನಿಮಾಗಳ ಭಿತ್ತಿಚಿತ್ರಗಳು, ಆಡಿಯೋ, ವಿಡಿಯೋ ಪ್ರಸಾರ ಸೇರಿದಂತೆ ಅಂಬರೀಶ್ ಅವರ ಹೆಸರಿನಲ್ಲಿ ಹತ್ತು ಹಲವು ಯೋಜನೆಗಳನ್ನು ಡಾ.ಅಂಬರೀಶ್ ಪ್ರತಿಷ್ಠಾನ ಹಾಗೂ ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ನಡೆಯಲಿವೆ.

Share This Article
Leave a Comment

Leave a Reply

Your email address will not be published. Required fields are marked *