ಶಾಲೆಗೆ ಹೋಗಿದ್ದ ವಿದ್ಯಾರ್ಥಿ ನಾಪತ್ತೆ – ತಿರುಪತಿಗೆ ತೆರಳಿರುವ ಶಂಕೆ

By
1 Min Read

ಕೋಲಾರ: ಪೋಷಕರು ಬುದ್ದಿವಾದ ಹೇಳಿದ ಹಿನ್ನೆಲೆ ಎಂಟನೇ ತರಗತಿ ವಿದ್ಯಾರ್ಥಿ (Student) ಮನೆ ಬಿಟ್ಟು ಹೋಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

ಕೋಲಾರ ಜಿಲ್ಲೆಯ ಕೆಜಿಎಫ್ (KGF) ತಾಲೂಕಿನ ಪೆದ್ದಪಲ್ಲಿ ಗ್ರಾಮದಲ್ಲಿಈ ಘಟನೆ ಜರುಗಿದ್ದು, ಗ್ರಾಮದ ಹರ್ಷಿತ್ ಎಂಬ ವಿದ್ಯಾರ್ಥಿ ಕಾಣೆಯಾಗಿದ್ದಾನೆ. ಕೆಜಿಎಫ್ ನಗರದ ಶಾಲೆಯೊಂದರಲ್ಲಿ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಯಾವಾಗಲೂ ಮೊಬೈಲ್‌ನಲ್ಲಿಯೇ ಆಟವಾಡಿಕೊಂಡಿದ್ದ. ಈ ಹಿನ್ನೆಲೆ ತಂದೆ ಶೇಖರ್ ಮಗನಿಗೆ ಬೈದು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಕೋಪಗೊಂಡ ಮಗ ಮನೆಬಿಟ್ಟು ಹೋಗಿದ್ದಾನೆ. ಇದನ್ನೂ ಓದಿ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

ಶುಕ್ರವಾರ ಎಂದಿನಂತೆ ಶಾಲೆಗೆ ಹೋಗಿದ್ದು, ಶಾಲೆ ಮುಗಿದ ಬಳಿಕ ಮನೆಗೆ ಬಂದಿರಲಿಲ್ಲ. ಅಲ್ಲದೇ ಶಾಲೆಯಲ್ಲಿ ತಿರುಪತಿಗೆ (Tirupati) ಹೋಗುವ ಮಾರ್ಗದ ಕುರಿತು ಸ್ನೇಹಿತರನ್ನು ವಿಚಾರಣೆ ಮಾಡಿದ್ದ ಎನ್ನಲಾಗಿದೆ. ಈ ಹಿನ್ನೆಲೆ ತಿರುಪತಿಗೆ ತೆರಳಿರುವ ಅನುಮಾನವನ್ನು ಪೋಷಕರು ವ್ಯಕ್ತಪಡಿಸಿದ್ದಾರೆ. ಸದ್ಯ ಪೋಷಕರು ರಾಬರ್ಟ್‌ ಸನ್ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಮಂತ್ರಾಲಯಕ್ಕೆ ಹೊರಟಿದ್ದ ಬಸ್‍ನಲ್ಲಿ ದಟ್ಟ ಹೊಗೆ – ಆತಂಕಕ್ಕೊಳಗಾದ ರಾಯರ ಭಕ್ತರು

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್