ಕಾರು, ಕಬ್ಬು ಕಟಾವು ಮಿಷಿನ್ ನಡುವೆ ಭೀಕರ ಅಪಘಾತ; ಐವರು ದುರ್ಮರಣ

Public TV
1 Min Read

ವಿಜಯಪುರ: ಕಾರು ಮತ್ತು ಕಬ್ಬು ಕಟಾವು ಮಿಷಿನ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೇಭಾವಿ (Bilebhavi) ಕ್ರಾಸ್ ಬಳಿ ನಡೆದಿದೆ.

ಮೃತರನ್ನು ವಿಜಯಪುರ ತಾಲೂಕಿನ ಅಲಿಯಾಬಾದ್ ನಿವಾಸಿಗಳೆಂದು ಗುರುತಿಸಲಾಗಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಶಾಸಕರೊಂದಿಗೆ ಅನುಚಿತ ವರ್ತನೆ – ಆರ್‌ಟಿಓ ಇನ್ಸ್‌ಪೆಕ್ಟರ್ ಅಮಾನತು

ಹುಣಸಗಿಯಿಂದ ತಾಳಿಕೋಟೆಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಮತ್ತು ಕಬ್ಬು ಕಟಾವು ಮಷಿನ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ತಾಳಿಕೋಟೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಡಿವೋರ್ಸ್ ವದಂತಿಗೆ ಫುಲ್ ಸ್ಟಾಪ್- ಜೊತೆಯಾಗಿ ಕಾಣಿಸಿಕೊಂಡ ಅಭಿಷೇಕ್, ಐಶ್ವರ್ಯಾ ರೈ

 

Share This Article