850 ಅಡಿಕೆ ಮರ ಕಡಿದ ಕೇಸ್‌ಗೆ ಟ್ವಿಸ್ಟ್ – ಮಗಳನ್ನ ಮದುವೆ ಮಾಡಿಕೊಡ್ತೀವಿ ಅಂತಾ 25 ಲಕ್ಷ ಪೀಕಿತ್ತು ಕುಟುಂಬ

Public TV
2 Min Read

– ಹೆಣ್ಣಿನ ಮನೆಯವರ ಕಳ್ಳಾಟ ಬಯಲು

ಮೈಸೂರು: ಮಗಳನ್ನು ಮದುವೆ (Marriage ) ಮಾಡಿಕೊಡುವುದಾಗಿ 25 ಲಕ್ಷ ರೂ. ಹಣ ಪಡೆದು ವಂಚಿಸಿದ (Cheated)  ಪ್ರಕರಣ ಈಗ ರೋಚಕ ತಿರುವು ಪಡೆದುಕೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನಗುನಹಳ್ಳಿ ಗ್ರಾಮದಲ್ಲಿ ನಡೆದಿದೆ.

ವೆಂಕಟೇಶ್, ಲಕ್ಷ್ಮಿ ವಂಚಿಸಿದ ಕುಟುಂಬ. ವೆಂಕಟೇಶ್ ಕಳೆದ ವರ್ಷ ಮಗಳನ್ನು ಮದುವೆ ಮಾಡಿಕೊಡುವುದಾಗಿ ಅಶೋಕ್ ಎಂಬ ವ್ಯಕ್ತಿಗೆ ಒಪ್ಪಿಗೆ ನೀಡಿದ್ದರು. ಆದರೆ ಕೊನೆಗೆ ಮದುವೆಗೆ ಒಪ್ಪದೆ 2023ರ ಆಗಸ್ಟ್ 10 ರಲ್ಲಿ ಅಶೋಕ್ ಮೇಲೆ 850 ಅಡಿಕೆ ಮರ ಕಡಿದಿದ್ದ ಸುಳ್ಳು ಆರೋಪವನ್ನು ಕುಟುಂಬ ಮಾಡಿತ್ತು. ಇದೀಗ ಪ್ರಕರಣ ರೋಚಕ ತಿರುವು ಪಡೆದಿದೆ. ಇದನ್ನೂ ಓದಿ:  ಬಿಜೆಪಿಯಂತೆ 28 ಸ್ಥಾನವನ್ನೂ ಗೆಲ್ತೀವಿ ಎನ್ನಲ್ಲ, 20 ಕ್ಷೇತ್ರ ಗೆಲ್ಲುವ ಗುರಿ ಇದೆ: ಚಲುವರಾಯಸ್ವಾಮಿ

ನಡೆದಿದ್ದೇನು?
ಕಳೆದ ವರ್ಷ ವೆಂಕಟೇಶ್, ಲಕ್ಷ್ಮಿ  ದಂಪತಿ ತಮ್ಮ ಮಗಳನ್ನು ಅಶೋಕ್‌ಗೆ ಕೊಟ್ಟು ಮದುವೆ ಮಾಡುಕೊಡುವುದಾಗಿ ಒಪ್ಪಿಗೆ ನೀಡಿದ್ದರು. ಒಪ್ಪಂದದ ನಂತರ ಅಶೋಕ್ ಬಳಿ ಹುಡುಗಿ ಎರಡು ಲಕ್ಷ ಹಣ ಪಡೆದಿದ್ದು, ಆಕೆಯ ತಂದೆ 15 ಲಕ್ಷ ರೂ. ತಾಯಿ 8 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ. ಒಪ್ಪಂದದ ನಂತರ ಒಂದು ವರ್ಷದ ಅಂತರದಲ್ಲಿ 25 ಲಕ್ಷ ರೂ. ಹಣವನ್ನು ಕುಟುಂಬ ವಸೂಲಿ ಮಾಡಿದೆ. ಹಣ ಪಡೆದ ಬಳಿಕ ಒಪ್ಪಿಗೆಯಂತೆ ಮದುವೆ ಮಾಡಿಕೊಡುವಂತೆ ಅಶೋಕ್ ಕೇಳಿದಾಗ ಕುಟುಂಬ ಹಿಂದೇಟು ಹಾಕಿದೆ. ಕೊನೆಗೆ ಅಶೋಕ್ ತಾನು ನೀಡಿದ ಹಣ ವಾಪಸ್ ನೀಡುವಂತೆ ಕೇಳಿದಾಗ ಆತನ ಮೇಲೆ 850 ಅಡಿಕೆ ಮರ ಕಡಿದಿದ್ದಾನೆ ಎಂದು ಸುಳ್ಳು ಆರೋಪ ಹೊರಿಸಿ ಜೈಲಿಗೆ ಕಳುಹಿಸಿದ್ದರು. ಇದನ್ನೂ ಓದಿ: ಮಕ್ಕಳು ಬೈಕ್‌ ಓಡಿಸಿದ್ದಕ್ಕೆ ಪೋಷಕರಿಗೆ ಬಿತ್ತು ದಂಡ; 23 ಕಾಲೇಜುಗಳ 800 ವಾಹನಗಳಿಗೆ ಫೈನ್‌

 ಜೈಲಿನಿಂದ ಹೊರ ಬಂದ ಅಶೋಕ್ ಮೋಸಗಾರರ ವಿರುದ್ಧ ಇದೀಗ ತಿರುಗಿ ಬಿದ್ದಿದ್ದು, ದಾಖಲೆಗಳ ಸಮೇತ ಕುಟುಂಬದ ಕಳ್ಳಾಟವನ್ನು ಬಯಲು ಮಾಡಿದ್ದಾರೆ. ಹುಡುಗಿ ಕುಟುಂಬಕ್ಕೆ ಹಣ ಕೊಟ್ಟಿರುವುದರ ಬಗ್ಗೆ ಹುಡುಗಿ ಹಾಗೂ ಅಶೋಕ್ ನಡುವೆ ನಡೆದಿದ್ದ ವಾಟ್ಸಪ್ ಮೆಸೇಜ್‌ಗಳ ದಾಖಲೆಯನ್ನು ಸಲ್ಲಿಸಿದ್ದಾರೆ. ಹುಡುಗಿ ಕುಟುಂಬದ ಕಳ್ಳಾಟದ ಬಗ್ಗೆ ದಾಖಲೆಗಳ ಸಮೇತ ಅಶೋಕ್ ಬಯಲು ಮಾಡಿದ್ದಾರೆ. ಇದನ್ನೂ ಓದಿ:  ರಾತ್ರಿ ರೈಲಿನಲ್ಲಿ ಪ್ರಯಾಣಿಸುವಾಗ ಮೊಬೈಲ್ ಸೌಂಡ್ ಜಾಸ್ತಿ ಮಾಡಿದ್ರೆ, ಜೋರಾಗಿ ಮಾತಾಡಿದ್ರೆ ಬೀಳುತ್ತೆ ಕೇಸ್

ಘಟನೆ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅರೋಪಿಗಳ ವಿರುದ್ಧ ದೂರು ದಾಖಲಾದರೂ ಪೊಲೀಸರು ಇನ್ನೂ ಅಶೋಕ್‌ಗೆ ನ್ಯಾಯ ಕೊಡಿಸಿಲ್ಲ. ಇದರಿಂದ ಬೇಸತ್ತ ಅಶೋಕ್ ಹೆಣ್ಣಿಗೊಂದು ನ್ಯಾಯ, ನನಗೊಂದು ನ್ಯಾಯ ಎಂದು ಪ್ರಶ್ನೆ ಮಾಡಿದ್ದಾರೆ. ನ್ಯಾಯಕ್ಕಾಗಿ ಹುಡುಗಿ ಮನೆ ಮುಂದೆ ಧರಣಿ ಕೂರಲು ಅಶೋಕ್ ನಿರ್ಧರಿಸಿದ್ದಾರೆ. ಇದನ್ನೂ ಓದಿ: ಅಕ್ಕನ ಆಭರಣಗಳ ಮೇಲೆ ತಂಗಿ ಕಣ್ಣು – ರೈಲಿನಲ್ಲೇ ಕೈಚಳಕ ತೋರಿ ಜೈಲು ಪಾಲು!

 

Share This Article