ಕುಡಿತ ಮತ್ತಿನಲ್ಲಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡು ಯುವಕ ಸಾವು

Public TV
1 Min Read

ಚಿಕ್ಕೋಡಿ (ಬೆಳಗಾವಿ): ಯುವಕನೊಬ್ಬ ಕುಡಿದ ಮತ್ತಿನಲ್ಲಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಪರಶುರಾಮ ತೇಲಸಂಗ (32) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ನಿವಾಸಿಯಾಗಿದ್ದ ಪರಶುರಾಮ ತೇಲಸಂಗ, ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಗ್ರಾಮದ ಲಕ್ಷ್ಮೀ ದೇವಸ್ಥಾನದ ಬಳಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡಿದ್ದ. ಇದನ್ನೂ ಓದಿ: ಅನಾರೋಗ್ಯದಿಂದ ಮೃತಪಟ್ಟರೂ ಬಾರದ ವಿದೇಶದಲ್ಲಿರೋ ಮಕ್ಕಳು – ಅಂತ್ಯಕ್ರಿಯೆ ಮಾಡಿ ಮಾನವೀಯತೆ ಮೆರೆದ ಪೊಲೀಸರು

ಕೂಡಲೇ ಸ್ಥಳೀಯರು ಆತನನ್ನು ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತೀವ್ರ ರಕ್ತಸ್ರಾವ ಉಂಟಾದ ಪರಿಣಾಮ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ.

ಈ ಘಟನೆ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್