ಕೌಶಲ್ ಕಿಶೋರ್ ಮನೆಯಲ್ಲಿ ಗುಂಡಿನ ದಾಳಿ- ಕೇಂದ್ರ ಸಚಿವರ ಮಗನ ಗೆಳೆಯನ ಕೊಲೆ

Public TV
1 Min Read

ಲಕ್ನೋ: ಕೇಂದ್ರ ಸಚಿವ ಕೌಶಲ್ ಕಿಶೋರ್ (Union Minister Kaushal Kishore) ಮನೆಯಲ್ಲಿ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತನನ್ನು ವಿಕಾಸ್ ಶ್ರೀವಾಸ್ತವ್ (Vikas Srivastava) ಎಂದು ಗುರುತಿಸಲಾಗಿದೆ. ಈತ ಸಚಿವರ ಮಗನ ಗೆಳೆಯ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಸಚಿವರ ಮಗನಿಂದ ಲೈಸೆನ್ಸ್ಡ್ ಪಿಸ್ತೂಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತ ವಿಕಾಸ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಶುಕ್ರವಾರ ಬೆಳಗ್ಗಿನ ಜಾವ 4 ಗಂಟೆಗೆ ವಿನಯ್ ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಮೃತದೇಹ ಹಾಸಿಗೆ ಬಳಿ ನೆಲದ ಮೇಲೆ ಬಿದ್ದಿತ್ತು. ಈ ಸಂದರ್ಭದಲ್ಲಿ ಅಜಯ್ ರಾವತ್, ಅಂಕಿತ್ ಶರ್ಮಾ, ಶಮೀಮ್ ಬಾಬಾ, ಬಂಟಿ ಮತ್ತು ಇನ್ನಿಬ್ಬರು ಅಪರಿಚತರು ಸ್ಥಳದಲ್ಲಿದ್ದರು ಎಂಬುದಾಗಿ ವರದಿಯಾಗಿದೆ.

ವಿನಯ್ ಶ್ರೀವಾಸ್ತವ್ ಅವರ ಕುಟುಂಬಸ್ಥರು ಕೊಲೆ ಆರೋಪದಡಿ ದೂರು ದಾಖಲಿಸಿದ್ದಾರೆ. ಪಶ್ಚಿಮ ಡಿಸಿಪಿ ರಾಹುಲ್ ರಾಜ್, ಎಡಿಸಿಪಿ ಚಿರಂಜೀವ್ ನಾಥ್ ಸಿನ್ಹಾ ಸೇರಿದಂತೆ ಭಾರೀ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್