ಹತ್ತೇ ಸೆಕೆಂಡ್‌ನಲ್ಲಿ ಲಕ್ಷಾಧಿಪತಿಯಾದ ಯುವಕ – ಬರಿಗೈಲಿ ಬಂದವನಿಗೆ ಸಿಕ್ಕಿದ್ದು ಬರೋಬ್ಬರಿ 94 ಲಕ್ಷ ಹಣ

By
2 Min Read

– 300ಕ್ಕೂ ಹೆಚ್ಚು ಕ್ಯಾಮೆರಾ ಪರಿಶೀಲಿಸಿ ಪ್ರಕರಣ ಬೇಧಿಸಿದ ಪೊಲೀಸರು

ಬೆಂಗಳೂರು: ಬರಿಗೈಯಲ್ಲಿ ಅಂಗಡಿಯೊಂದಕ್ಕೆ ಬಂದ ಯುವಕನಿಗೆ ಬರೋಬ್ಬರಿ 94 ಲಕ್ಷ ರೂ. ಇದ್ದ ಹಣದ ಬ್ಯಾಗ್ ಸಿಕ್ಕಿದ್ದು, ಹತ್ತೇ ಸೆಕೆಂಡ್‌ನಲ್ಲಿ ಲಕ್ಷಾಧಿಪತಿಯಾದ ಘಟನೆ ಬೆಂಗಳೂರಿನ (Bengaluru) ಚಂದ್ರಲೇಔಟ್‌ನಲ್ಲಿ (Chandra Layout) ನಡೆದಿದೆ.

ಪ್ರಮೋದ್ ಎಂಬಾತ ಸೈಟ್ ಖರೀದಿಸುವ ಸಲುವಾಗಿ 94 ಲಕ್ಷ ರೂ. ಕೂಡಿಸಿಟ್ಟಿದ್ದ. ಈತ ಚಂದ್ರಲೇಔಟ್ ನಿವಾಸಿಯಾಗಿದ್ದು, ಹಣವನ್ನು ಎಣಿಸಲು ಸ್ನೇಹಿತನ ಅಂಗಡಿಗೆ ತೆಗೆದುಕೊಂಡು ಹೋಗಲು ಮುಂದಾಗಿದ್ದ. ಅಲ್ಲದೇ ವಕೀಲರ ಕಚೇರಿಗೆ ತೆರಳಲು ರೆಡಿಯಾಗಿದ್ದ. ಬಾಕ್ಸ್‌ನಲ್ಲಿ ಹಣವನ್ನು ಹಾಕಿಕೊಂಡು ಮನೆಯಿಂದ ಹೊರಟ ಪ್ರಮೋದ್ ಮನೆ ಕೆಳಗೆ ಬಂದು ಕಾರಿನ ಡೋರ್ ತೆಗೆಯಲೆಂದು ಕೈಯಲ್ಲಿದ್ದ ಹಣದ (Money) ಬ್ಯಾಗ್ (Bag) ಅನ್ನು ಪಕ್ಕದಲ್ಲೇ ಇದ್ದ ಅಪರಿಚಿತ ಆ್ಯಕ್ಟಿವಾ ಸ್ಕೂಟಿ ಮೇಲೆ ಇರಿಸಿದ್ದಾನೆ. ಬಳಿಕ ದಾಖಲೆಗಳಿದ್ದ ಬ್ಯಾಗ್ ಅನ್ನು ಮಾತ್ರ ಕಾರಿನಲ್ಲಿ ಹಾಕಿಕೊಂಡು ಹಣದ ಬ್ಯಾಗ್ ಅನ್ನು ಮರೆತು ಹೋಗಿದ್ದಾನೆ. ಇದನ್ನೂ ಓದಿ: ಡೀಲ್‍ನಲ್ಲಿ ‘ವಿಶ್ವನಾಥ್‌ ಜೀʼ ಪಾತ್ರಧಾರಿ ಚನ್ನನಾಯ್ಕ್ ತನ್ನ ಪಾತ್ರದ ಬಗ್ಗೆ ವಿವರಿಸಿದ್ದು ಹೀಗೆ..

ಬೈಕ್ ಮಾಲೀಕ ವರುಣ್ ಗೌಡ ಬೈಕ್ ಬಳಿ ಬಂದು ನೋಡಿದಾಗ ಬ್ಯಾಗ್ ಕಾಣಿಸಿದ್ದು, ಓಪನ್ ಮಾಡಿ ನೋಡಿದಾಗ ಹಣದ ಕಂತೆ ಕಂಡಿದೆ. ವರುಣ್ ಖಾಸಗಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಡಿಪಾರ್ಟ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದು, ಹಣದ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಶ್ರೀನಗರದಲ್ಲಿರುವ ಮನೆಯಲ್ಲಿ ಹಣವನ್ನು ಹಾಗೆ ಇಟ್ಟುಕೊಂಡಿದ್ದ ವರುಣ್ 94 ಲಕ್ಷ ರೂ. ಹಣ ಏನು ಮಾಡಬೇಕು ಎನ್ನುವ ಗೊಂದಲದಲ್ಲೇ ಐದು ದಿನ ಕಳೆದಿದ್ದ. ಇದನ್ನೂ ಓದಿ: ಐಸಿಸ್ ಉಗ್ರನೊಂದಿಗೆ ನಿರಂತರ ಸಂಪರ್ಕ – ಎನ್‍ಐಎಯಿಂದ ಯಾದಗಿರಿ ವ್ಯಕ್ತಿ ವಿಚಾರಣೆ

ವರುಣ್ ಈ ಹಣದಿಂದ ಸೆಕೆಂಡ್ ಹ್ಯಾಂಡ್ ಇನ್ನೋವಾ ಕಾರು ಖರೀದಿಗೂ ಪ್ಲಾನ್ ಮಾಡಿಕೊಂಡಿದ್ದ. ಆದರೆ ಎಲ್ಲಿಯೂ ಹಣ ಕೊಡದೇ ಮನೆಯಲ್ಲಿಯೇ ಇಟ್ಟುಕೊಂಡಿದ್ದ. ಇತ್ತ ಸ್ನೇಹಿತನ ಅಂಗಡಿ ಬಳಿ ಹೋಗಿ ಕಾರು ಪರಿಶೀಲಿಸಿದ ಪ್ರಮೋದ್‌ಗೆ ಹಣ ಇಲ್ಲದೇ ಇರುವುದನ್ನು ಕಂಡು ಶಾಕ್ ಆಗಿದೆ. ಬಳಿಕ ಪ್ರಮೋದ್ ಮನೆಯ ಬಳಿ ವಾಪಸ್ ಬಂದು ನೋಡಿದಾಗ ಬೈಕ್, ಹಣ ಎರಡೂ ಇರಲಿಲ್ಲ. ಇದನ್ನೂ ಓದಿ: ಸುಲಭವಾಗಿ ಸಿಕ್ಕ 50 ಲಕ್ಷಕ್ಕೆ ಚೈತ್ರಾ ಫಿದಾ – 3.5 ಕೋಟಿಗೆ ಶುರುವಾದ ಪ್ಲಾನ್ 5 ಕೋಟಿಗೆ ಏರಿದ್ದೇ ರೋಚಕ

ಹಣ ಕಳೆದುಕೊಂಡ ಪ್ರಮೋದ್ ಚಂದ್ರಲೇಔಟ್ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬೈಕ್ ಹೊರಟ ಮಾರ್ಗದಲ್ಲಿರುವ 300ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲನೆ ಮಾಡಿದ್ದಾರೆ. ಕೊನೆಗೂ ಆರೋಪಿಯನ್ನು ಸೆರೆ ಹಿಡಿದು 94 ಲಕ್ಷ ರೂ. ಹಣವನ್ನು ರಿಕವರಿ ಮಾಡಿದ್ದಾರೆ. ವರುಣ್ ತಾನಾಗಿಯೇ ಆ ಹಣ ತಂದು ಪೊಲೀಸರಿಗೆ ಕೊಟ್ಟಿದ್ದರೆ ಹೀರೋ ಆಗುತ್ತಿದ್ದ. ಆದರೆ ಮನೆಯಲ್ಲಿ ಹಣ ಇಟ್ಟುಕೊಂಡು ಈಗ ಆರೋಪಿಯಾಗಿದ್ದಾನೆ. ಇದನ್ನೂ ಓದಿ: ಅಪಘಾತಕ್ಕೀಡಾಗಿ ಮೃತಪಟ್ಟ ಅಜ್ಜಿ ಪ್ರಕರಣಕ್ಕೆ ಟ್ವಿಸ್ಟ್- ಮೊಮ್ಮಗನಿಂದಲೇ ಕೊಲೆ!

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್