ಶ್ರದ್ಧಾ ಹತ್ಯೆ ಕೇಸ್ – ಮೂಳೆಗಳನ್ನು ಮಿಕ್ಸಿಯಲ್ಲಿ ಪುಡಿ ಮಾಡಿದ್ದ ಅಫ್ತಾಬ್

Public TV
2 Min Read

ನವದೆಹಲಿ: ಕಳೆದ ವರ್ಷ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ನಡೆದಿದ್ದ ಯುವತಿ ಶ್ರದ್ಧಾಳ (Shraddha Walkar) ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆಯ ಕುರಿತು 6,600 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಇನ್ನೂ ಅನೇಕ ಭಯಾನಕ ವಿವರಗಳು ಬಹಿರಂಗವಾಗಿದೆ.

ಶ್ರದ್ಧಾಳನ್ನು ಕೊಲೆ ಮಾಡಿದ್ದ ಆಕೆಯ ಲಿವ್‌ಇನ್ ಪಾರ್ಟ್‌ನರ್ ಅಫ್ತಾಬ್ ಪೂನಾವಾಲ (Aaftab Poonawala) ಆಕೆಯ ಮೂಳೆಗಳನ್ನು ಮಿಕ್ಸಿಯಲ್ಲಿ (Mixer) ಹಾಕಿ ಪುಡಿ ಮಾಡಿದ್ದ. ಮೇ 18 ರಂದು ಅಫ್ತಾಬ್ ಕೊಲೆ ಮಾಡಿದ ಬಳಿಕ ಝೊಮಾಟೋದಿಂದ ಚಿಕನ್ ರೋಲ್ ಅನ್ನು ತರಿಸಿಕೊಂಡು ಊಟ ಮಾಡಿದ್ದ ಎಂದು ಉಲ್ಲೇಖಿಸಲಾಗಿದೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ಶ್ರದ್ಧಾ ವಾಕರ್ ಮತ್ತು ಆಫ್ತಾಬ್ ಪೂನಾವಾಲಾ ದೆಹಲಿಗೆ ತೆರಳಿದ್ದರು. ಆದರೆ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿತ್ತು. ತಮ್ಮ ಖರ್ಚು ವೆಚ್ಚಗಳು ಹಾಗೂ ಅಫ್ತಾಬ್‌ಗೆ ಇತರ ಯುವತಿಯರೊಂದಿಗಿದ್ದ ಸಂಬಂಧದ ಬಗ್ಗೆ ಆಗಾಗ ಜಗಳವಾಗುತ್ತಿತ್ತು. ಆತನಿಗೆ ದೆಹಲಿಯಿಂದ ದುಬೈ ತನಕವೂ ಗೆಳತಿಯರಿದ್ದರು ಎನ್ನಲಾಗಿದೆ.

ಮೇ 18 ರಂದು ಅಫ್ತಾಬ್ ಹಾಗೂ ಶ್ರದ್ಧಾ ಇಬ್ಬರೂ ಮುಂಬೈಗೆ (Mumbai) ಹೋಗಲು ಯೋಜಿಸಿದ್ದರು. ಆದರೆ ಅಫ್ತಾಬ್ ಇದ್ದಕ್ಕಿದ್ದಂತೆ ಟಿಕೆಟ್ ಅನ್ನು ರದ್ದುಗೊಳಿಸಿದ್ದ. ಬಳಿಕ ಇಬ್ಬರ ನಡುವೆ ಮತ್ತೊಂದು ಖರ್ಚಿನ ವಿಚಾರವಾಗಿ ಜಗಳ ಏರ್ಪಟ್ಟಿತ್ತು. ಆ ಕ್ಷಣದ ಕೋಪದಲ್ಲಿ ಅಫ್ತಾಬ್ ಶ್ರದ್ಧಾಳ ಕತ್ತು ಹಿಸುಕಿ ಕೊಂದಿದ್ದ.

ಗೆಳತಿಯ ಕೊಲೆ ಮಾಡಿದ ಬಳಿಕ ಅಫ್ತಾಬ್ ಆಕೆಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಿಲೇವಾರಿ ಮಾಡಲು ಯೋಜಿಸಿದ್ದ. ಇದಕ್ಕಾಗಿ ಆತ ಒಂದು ಚೀಲವನ್ನೂ ಖರೀದಿಸಿದ್ದ. ಆದರೆ ಇದರಿಂದ ಆತ ತಕ್ಷಣ ಸಿಕ್ಕಿಬೀಳುತ್ತಾನೆ ಎಂದು ಭಾವಿಸಿ, ಈ ಯೋಜನೆಯನ್ನು ಕೈಬಿಟ್ಟಿದ್ದ. ಬಳಿಕ ಶ್ರದ್ಧಾಳ ದೇಹವನ್ನು ತುಂಡು ತುಂಡಾಗಿ ಕತ್ತರಿಸಲು ಯೋಜಿಸಿ, ಇದಕ್ಕಾಗಿ ಗರಗಸ, ಸುತ್ತಿಗೆ, 3 ಚಾಕುಗಳು ಮಾತ್ರವಲ್ಲದೇ ಬ್ಲೋಟಾರ್ಚ್‌ಗಳನ್ನೂ ಖರೀದಿಸಿದ್ದ. ಇದನ್ನೂ ಓದಿ: ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯಲ್ಲಿ ಅಗ್ನಿ ಅವಘಡ – ಎದ್ನೋ ಬಿದ್ನೋ ಎಂದು ಹೊರ ಓಡಿದ ಸಿಬ್ಬಂದಿ

ಅಫ್ತಾಬ್ ಶ್ರದ್ಧಾಳ ದೇಹವನ್ನು 35 ತಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ. ಆತನ ಇತರ ಗೆಳತಿಯರು ಮನೆಗೆ ಭೇಟಿ ನೀಡುತ್ತಿದ್ದಾಗಲೆಲ್ಲಾ ಅವುಗಳನ್ನು ಅಲ್ಲಿಂದ ತೆಗೆದು ಅಡುಗೆ ಮನೆಯಲ್ಲಿ ಇಡುತ್ತಿದ್ದ. ಆಕೆಯ ಮೊಬೈಲ್ ಅನ್ನು ತಾನೇ ಇಟ್ಟುಕೊಂಡಿದ್ದು, ನಂತರ ಮುಂಬೈನಲ್ಲಿ ಅದನ್ನು ಎಸೆದಿದ್ದ. ಮೇ 18ರ ಬಳಿಕ ಶ್ರದ್ಧಾಳ ಸಾಮಾಜಿಕ ಮಾಧ್ಯಮಗಳ ಖಾತೆಗಳು ಆತನ ಫೋನ್‌ನಿಂದ ಚಾಲನೆಯಾಗುತ್ತಿದ್ದ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ.

ಕೊಲೆಯಾದ ಶ್ರದ್ಧಾಳ ದೇಹವನ್ನು 35 ತುಂಡುಗಳಾಗಿ ಕತ್ತರಿಸಲಾಗಿದೆ ಎಂದು ಹೇಳಿಕೆ ನೀಡಲಾಗಿದೆಯಾದರೂ ಇಲ್ಲಿಯವರೆಗೆ ಕೇವಲ 20 ದೇಹದ ಭಾಗಗಳು ಮಾತ್ರವೇ ಪತ್ತೆಯಾಗಿವೆ. ಆಕೆಯ ತಲೆ ಇನ್ನೂ ಪತ್ತೆಯಾಗಿಲ್ಲ. ಕಳೆದ ವರ್ಷಾಂತ್ಯದಲ್ಲಿ ಪಾಲಿಗ್ರಾಫ್ ಹಾಗೂ ನಾರ್ಕೋ-ಅನಾಲಿಸಿಸ್ ಪರೀಕ್ಷೆಗಳಲ್ಲಿ ಅಫ್ತಾಬ್ ತಾನು ಕೊಲೆ ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಕಾರು, ಟ್ಯಾಂಕರ್ ನಡುವೆ ಭೀಕರ ಅಪಘಾತ – ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಮಸಣಕ್ಕೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *