ಟಿಕೆಟ್ ಸಿಗದ್ದಕ್ಕೆ ಟವರ್ ಹತ್ತಿ ಬೆದರಿಕೆ ಹಾಕಿದ ಆಪ್ ಮುಖಂಡ

Public TV
1 Min Read

ನವದೆಹಲಿ: ಆಮ್ ಆದ್ಮಿ ಪಕ್ಷದ (Aam Aadmi Party) ಮುಖಂಡನೊಬ್ಬ ದೆಹಲಿಯಲ್ಲಿ (New Delhi) ಮುಂಬರುವ ಪಾಲಿಕೆ ಚುನಾವಣೆಗೆ (Election) ಟಿಕೆಟ್‌ ಸಿಗದ ಕಾರಣ ಟೆಲಿಫೋನ್ ಟವರ್ ಮೇಲೆ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಪೂರ್ವ ದೆಹಲಿಯ ಮಾಜಿ ಕೌನ್ಸಿಲರ್ ಹಸೀಬ್-ಉಲ್ ಹಸನ್ ಟವರ್ ಏರಿ ಕುಳಿತ ಆಪ್ ಮುಖಂಡ. ಇನ್ನೂ ಘಟನೆಗೆ ಸಂಬಂಧಿಸಿ ಆತನೇ ಫೇಸ್‍ಬುಕ್ ಲೈವ್ ಮಾಡಿದ್ದಾನೆ. ತನಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿಲ್ಲ ಎಂದು ಪ್ರತಿಭಟನೆ ಮಾಡಿದ್ದಾನೆ.

ಫೇಸ್‍ಬುಕ್ ಲೈವ್‍ನಲ್ಲಿ ಆಪ್ ನಾಯಕರಾದ ಅತಿಶಿ ಮತ್ತು ದುರ್ಗೇಶ್ ಪಾಠಕ್ ವಿರುದ್ಧ ದೂರಿದ್ದಾರೆ. ಇಂದು ನನಗೆ ಏನಾದರೂ ಆದರೆ ಅದಕ್ಕೆ ಅತಿಶ್ ಹಾಗೂ ದುರ್ಗೇಶ್ ಅವರೇ ಕಾರಣ ಏಕೆಂದರೆ ಅವರು ನನ್ನ ಬ್ಯಾಂಕ್ ಪಾಸ್‍ಬುಕ್ ಸೇರಿದಂತೆ ಅನೇಕ ದಾಖಲೆಯನ್ನು ಅವರೇ ಇಟ್ಟುಕೊಂಡಿದ್ದಾರೆ. ಆದರೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನವಾಗಿದೆ. ಆದರೆ ನನಗೆ ಅದ್ಯಾವ ದಾಖಲೆಯನ್ನು ಅವರು ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಇಸ್ಲಾಮಿಕ್ ಶಿಕ್ಷಣ ಕೇಂದ್ರದಲ್ಲಿ ಸಂಸ್ಕೃತ, ಉಪನಿಷತ್ ಕಲಿಕೆ- ಕೇಂದ್ರದ ನಡೆಗೆ ನೆಟ್ಟಿಗರ ಮೆಚ್ಚುಗೆ

ಆದರೆ ಈ ಆರೋಪಗಳಿಗೆ ಆಮ್ ಆದ್ಮಿ ಪಕ್ಷದ ಮುಖಂಡರು ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಸಂಬಂಧಿಕರ ಮೇಲಿನ ದ್ವೇಷಕ್ಕೆ ಮಗಳನ್ನೆ ಬಲಿಕೊಟ್ಟ ಪಾಪಿ ತಂದೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *