ನಿರ್ದೇಶಕ ಕೃಷ್ಣ ಹುಟ್ಟು ಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ‘ಕಾಳಿ’ ಮೋಷನ್ ಪೋಸ್ಟರ್

Public TV
1 Min Read

ಭಿಷೇಕ್ ಅಂಬರೀಶ್ ನಟನೆಯ ಮೂರನೇ ಸಿನಿಮಾದ ಮೋಷನ್ ಪೋಸ್ಟರ್ ಇಂದು ಬಿಡುಗಡೆ ಆಗಿದೆ. ಇಂದು ಈ ಸಿನಿಮಾದ ನಿರ್ದೇಶಕ ಕೃಷ್ಣ ಅವರು ಹುಟ್ಟು ಹಬ್ಬ. ಈ ಸಂದರ್ಭದಂದು ಖಡಕ್ ಆಗಿರುವ ಲುಕ್ ನಲ್ಲಿ ಅಭಿಷೇಕ್ ಇರುವ ಪೋಸ್ಟರ್ ರಿಲೀಸ್ ಮಾಡಿದೆ ಚಿತ್ರತಂಡ. ಈ ಪೋಸ್ಟರ್ ಅನ್ನು ವಿಶೇಷವಾಗಿ ಡಿಸೈನ್ ಮಾಡಲಾಗಿದ್ದು, ಅಭಿಷೇಕ್ ಖಡಕ್ ಲುಕ್ ನಲ್ಲಿ ಕಾಣಿಸುತ್ತಾರೆ. ಇದನ್ನೂ ಓದಿ : ನಯನತಾರಾ ಮದುವೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಜರ್?

ಅಭಿಷೇಕ್ ಮತ್ತು ಕೃಷ್ಣ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಕಾವೇರಿ ಗಲಾಟೆಯ ಹಿನ್ನೆಲೆಯಾಗಿಟ್ಟುಕೊಂಡು ಕಥೆ ಬರೆದಿದ್ದಾರಂತೆ ನಿರ್ದೇಶಕರು. ಮೊನ್ನೆಯಷ್ಟೇ ಅಂಬರೀಶ್ ಅವರ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ರಿಲೀಸ್ ಮಾಡಿದ್ದರು ನಿರ್ದೇಶಕರು. ಇವತ್ತು ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಸನ್ನಿ ಲಿಯೋನ್ ಫುಲ್ ಗರಂ: ಓರ್ವ ವ್ಯಕ್ತಿಗೆ ಸನ್ನಿ ಕೊಟ್ರು ಚಪ್ಪಲಿ ಏಟು

ಸದ್ಯ ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದ ಶೂಟಿಂಗ್ ಮುಗಿದ ನಂತರ ಕಾಳಿ ಸಿನಿಮಾಗಾಗಿ ಕೆಲಸ ಮಾಡಲಿದ್ದಾರೆ. ಬ್ಯಾಡ್ ಮ್ಯಾನರ್ಸ್ ಸಿನಿಮಾವನ್ನು ದುನಿಯಾ ಸೂರಿ ನಿರ್ದೇಶನ ಮಾಡುತ್ತಿದ್ದು, ಬಹುತೇಕ ಶೂಟಿಂಗ್ ಮುಗಿದಿದೆ ಎನ್ನಲಾಗುತ್ತಿದೆ. ಕಾಳಿ ಸಿನಿಮಾದಲ್ಲಿ ಅಭಿಷೇಕ್ ಕಾವೇರಿ ಗಲಾಟೆ ಹಿನ್ನೆಲೆಯಲ್ಲಿ ನಡೆದ ಪ್ರೇಮಕಥೆಗೆ ನಾಯಕನಾಗಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *