ಬಿಡಿಎ ಅಧಿಕಾರಿಗಳಿಗೆ ಎಸಿಬಿ ಶಾಕ್‌- ಕಂತೆ ಕಂತೆ ನೋಟು, ಬ್ಯಾಗ್‌ಗಟ್ಟಲೆ ದಾಖಲೆಗಳು ವಶ!

Public TV
1 Min Read

ಬೆಂಗಳೂರು: ನಗರದ ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿ ಅಧಿಕಾರಿಗಳಿಗೆ ಎಸಿಬಿ ಶಾಕ್‌ ನೀಡಿದೆ. ಏಕಕಾಲಕ್ಕೆ 60ಕ್ಕೂ ಹೆಚ್ಚು ಅಧಿಕಾರಿಗಳು ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಹಣ ವಸೂಲಿ ಮಾಡುತ್ತಿರುವ ಬಗ್ಗೆ ಬಿಡಿಎ ಅಧಿಕಾರಿಗಳ ವಿರುದ್ಧ ಪದೇ ಪದೇ ಆರೋಪಗಳು ಕೇಳಿಬರುತ್ತಿದ್ದವು. ಎಸಿಬಿ ಎಡಿಜಿಪಿ ಸೀಮಂತ್‌ ಕುಮಾರ್‌ ನೇತೃತ್ವದಲ್ಲಿ ಖುದ್ದು ಮೂವರು ಎಸ್‌ಪಿಗಳು ಬಿಡಿಎ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಡಿ.13ರಿಂದ ಬೆಳಗಾವಿ ವಿಧಾನಮಂಡಲ ಅಧಿವೇಶನ

ಬಿಡಿಎ ಭೂ ಸ್ವಾಧೀನ ವಿಭಾಗ, ಕಾರ್ಯದರ್ಶಿಗಳ ಕಚೇರಿಗಳ ಮೇಲೆ ಈ ದಾಳಿ ನಡೆದಿದೆ. ಡಿಎಸ್ 1,2,3,4 ಕಚೇರಿಗಳು ಹಾಗೂ ಅವರ ಅಪ್ತರ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಭೂ ಸ್ವಾಧೀನ ವಿಭಾಗದಲ್ಲಿ ಸ್ವಾಧೀನ ಜಾಗಕ್ಕೆ ಪರಿಹಾರ ಸೈಟ್ ನೀಡುವಲ್ಲಿ ಅಕ್ರಮ, ಪರಿಹಾರದ ಹಣ ನೀಡುವಲ್ಲಿ ಅಕ್ರಮ ದೂರುಗಳು ಕೇಳಿ ಬಂದಿದ್ದವು. ದಾಳಿ ವೇಳೆ ಬಿಡಿಎ ಡೆಪ್ಯುಟಿ ಸೆಕ್ರೆಟರಿ ನವೀನ್ ಜೋಸೆಫ್ ಕಚೇರಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಹಣವನ್ನು ವಶಕ್ಕೆ ಪಡೆದು ಪರಿಶೀಲನೆ ಮುಂದುವರಿಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಈಗಲೂ ರೈತರು ಪ್ರತಿಭಟನೆ ಮಾಡುತ್ತಿರುವುದು ಯಾಕೆ – ಅಮರಿಂದರ್ ಪ್ರಶ್ನೆ

ಕಚೇರಿಯಲ್ಲಿದ್ದ ಎಂಟು ಅಧಿಕಾರಿಗಳ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಪಾರ್ಕಿಂಗ್‍ನಲ್ಲಿರುವ ವಾಹನಗಳು ಹಾಗೂ ಹೊರಗಿದ್ದವರನ್ನೂ ಪರಿಶೀಲನೆ ನಡೆಸಲಾಗಿದೆ. ಫಾರ್ಚೂನರ್ ಕಾರ್‌ವೊಂದರಲ್ಲಿ ಬ್ಯಾಗ್‌ಗಟ್ಟಲೆ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಸದ್ಯ ಕಾರು ಮತ್ತು ಚಾಲಕನನ್ನು ಅಧಿಕಾರಿಗಳು ವಶಕ್ಕೆ ಪಡೆದರು. ನಂತರ ಸಂಬಂಧಪಟ್ಟ ಮಾಲೀಕನಿಗೆ ಫೋನ್‌ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡು ಪರಿಶೀಲನೆ ನಡೆಸಲಾಯಿತು. ಕಾರಿನಲ್ಲಿ ಸೀಲ್‌ಗಳು ಪತ್ತೆಯಾಗಿದ್ದು, ಎಸಿಬಿ ತಂಡ ಪರಿಶೀಲನೆ ನಡೆಸಿತು. ಇದೇ ವೇಳೆ ಕಚೇರಿಯ ಹೊರಗೆ ಹಾಗೂ ಒಳಗಡೆ ಇದ್ದ ಸಾರ್ವಜನಿಕರನ್ನೂ ಪರಿಶೀಲನೆಗೆ ಒಳಪಡಿಸಲಾಯಿತು.

Share This Article
Leave a Comment

Leave a Reply

Your email address will not be published. Required fields are marked *