ಬೈಕ್, ಲಾರಿ ನಡುವೆ ಅಪಘಾತ: ಇಬ್ಬರು ಯುವಕರ ದುರ್ಮರಣ

Public TV
0 Min Read

ಮಂಡ್ಯ: ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.

22 ವರ್ಷದ ಅಜಿತ್ ಮತ್ತು 26 ವರ್ಷದ ಉಮೇಶ್ ಮೃತ ದುರ್ದೈವಿಗಳು. ತಡರಾತ್ರಿ ಕೆಲಸದ ನಿಮಿತ್ತ ಇಬ್ಬರು ಯುವಕರು ಬೈಕ್‍ನಲ್ಲಿ ತೆರಳುತ್ತಿದ್ರು. ಈ ವೇಳೆ ಮದ್ದೂರು ಕೆಎಸ್‍ಆರ್‍ಟಿಸಿ ನಿಲ್ದಾಣದ ಸಮೀಪ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದೀಗ ಮಕ್ಕಳ ಸಾವನ್ನು ನೋಡಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *