ಶಿವಮೊಗ್ಗ | ಕಾರು, ಬಸ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
0 Min Read

ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಾಗರ (Sagar) ತಾಲೂಕಿನ ‌ಆನಂದಪುರ ಸಮೀಪ ನಡೆದಿದೆ.

ಮೃತಪಟ್ಟ ಯುವಕರನ್ನು ದೊಡ್ಡಬಳ್ಳಾಪುರ (Doddaballapura) ಮೂಲದ ಶರಣ್ ಹಾಗೂ ಅಕ್ಷಯ್ ಎಂದು ಗುರುತಿಸಲಾಗಿದೆ. ಕಾರು ಶಿವಮೊಗ್ಗದ ಕಡೆಯಿಂದ ಹೊನ್ನಾವರಕ್ಕೆ ತೆರಳುತಿತ್ತು. ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಆನಂದಪುರ ಠಾಣೆ ‌ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article