ಬೈಕಿಗೆ, ನಿಂತಿದ್ದ ವಿದ್ಯಾರ್ಥಿನಿಗೆ ಕಾರು ಡಿಕ್ಕಿ – ಯುವತಿಯ ಕಾಲು ತುಂಡಾಯ್ತು, ಸವಾರ ಸಾವು

Public TV
1 Min Read

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮೊದಲಿಗೆ ಬೈಕ್‍ಗೆ ಹಾಗೂ ನಂತರ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಮೃತಪಟ್ಟಿದ್ದು, ವಿದ್ಯಾರ್ಥಿನಿ ಕಾಲು ತುಂಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೋಡಿಶೆಟ್ಟಿಪುರ ಗ್ರಾಮದಲ್ಲಿ ನಡೆದಿದೆ.

ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಗದಗ ಮೂಲದ ಸಂತೋಷ್ (22) ಮೃತ ದುರ್ದೈವಿ. ಕಾರ್ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿತ್ತು. ಆದರೆ ಚಾಲಕ ಅತಿ ವೇಗವಾಗಿ ಬರುತ್ತಿದ್ದ ಕಾರಣ ಕೋಡಿಶೆಟ್ಟಿಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೈಕಿಗೆ ಮತ್ತು ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದು, ಇತ್ತ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಮೌನಶ್ರಿ(20) ಕಾಲು ಕಟ್ ಆಗಿದೆ. ಇನ್ನೂ ಕಾರಿನಲ್ಲಿದ್ದ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *