ಅಜಿತ್ ಕುಮಾರ್, ಬಾಲಯ್ಯಗೆ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

Public TV
2 Min Read

ಟ ಅಜಿತ್ ಕುಮಾರ್ (Ajith Kumar), ಬಾಲಯ್ಯ, ಸಿಂಗರ್ ಅರಿಜಿತ್ ಸಿಂಗ್, ಶೇಖರ್ ಕಪೂರ್ ಸೇರಿದಂತೆ ಹಲವು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು (ಏ.28) ಪದ್ಮ ಪ್ರಶಸ್ತಿ ಪ್ರದಾನ (Padma Awards 2025) ಮಾಡಿದ್ದಾರೆ. ಇದನ್ನೂ ಓದಿ:ಮಂತ್ರವಾದಿ ಗೆಟಪ್‌ನಲ್ಲಿ ಬಂದ ಸಮಂತಾ- ಏನಿದು ಹೊಸ ಅವತಾರ?

ದೆಹಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ತಮಿಳು ನಟ ಅಜಿತ್ ಕುಮಾರ್ ಮತ್ತು ತೆಲುಗು ನಟ ಬಾಲಯ್ಯ (Balayya) ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಪದ್ಮ ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ:

ದಿವಂಗತ ಗಾಯಕ ಪಂಕಜ್ ಉದಾಸ್- ಪದ್ಮಭೂಷಣ

ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್-ಪದ್ಮಭೂಷಣ

ಕನ್ನಡದ ನಟ ಅನಂತ್ ನಾಗ್- ಪದ್ಮಭೂಷಣ

ನಟ ಅಶೋಕ್ ಲಕ್ಷ್ಮಣ್ ಸರಾಫ್- ಪದ್ಮಶ್ರೀ

ನಟನಾ ತರಬೇತುದಾರ, ರಂಗ ನಿರ್ದೇಶಕ ಬ್ಯಾರಿ ಗಾಡ್ಫ್ರೇ ಜಾನ್-ಪದ್ಮಶ್ರೀ

ಗಾಯಕ ಜಸ್ಪಿಂದರ್ ನರುಲಾ- ಪದ್ಮಶ್ರೀ

ಗಾಯಕಿ ಅಶ್ವಿನಿ ಭಿಡೆ-ದೇಶಪಾಂಡೆ-ಪದ್ಮಶ್ರೀ

ಸಂಗೀತ ಸಂಯೋಜಕ ರಿಕಿ ಗ್ಯಾನ್ ಕೇಜ್-ಪದ್ಮಶ್ರೀ

ಜಾನಪದ ಗಾಯಕ ಭೇರು ಸಿಂಗ್ ಚೌಹಾಣ್-ಪದ್ಮಶ್ರೀ

ಭಕ್ತಿ ಗಾಯಕ ಹರ್ಜಿಂದರ್ ಸಿಂಗ್ ಶ್ರೀನಗರ ವಾಲೆ-ಪದ್ಮಶ್ರೀ

ಜಾನಪದ ಸಂಗೀತಗಾರ ಜೋಯ್ನಾಚರಣ್ ಬಠಾರಿ-ಪದ್ಮಶ್ರೀ

ಶಾಸ್ತ್ರೀಯ ಗಾಯಕಿ ಕೆ ಓಮನಕುಟ್ಟಿ ಅಮ್ಮ-ಪದ್ಮಶ್ರೀ

ಗಾಯಕ ಮಹಾಬೀರ್ ನಾಯಕ್ – ಪದ್ಮಶ್ರೀ

ಮಮತಾ ಶಂಕರ್ – ಪದ್ಮಶ್ರೀ

Share This Article