ಅಯೋಧ್ಯೆಗೆ 2ನೇ ಬಾರಿ ಭೇಟಿ ಕೊಟ್ಟ ಬಿಗ್ ಬಿ

Public TV
1 Min Read

ಬಾಲಿವುಡ್ ನಟ ಅಮಿತಾಭ್ ಬಚ್ಚನ್ (Amitabh Bachchan) ಇದೀಗ ಅಯೋಧ್ಯೆಗೆ (Ayodhya) ಭೇಟಿ ನೀಡಿದ್ದಾರೆ. ಬಾಲರಾಮ ದೇವರ ದರ್ಶನ ಪಡೆದಿದ್ದಾರೆ. ಬಿಗ್ ಬಿ ಅಯೋಧ್ಯೆಗೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಅಯೋಧ್ಯೆಯಲ್ಲಿ ನಿರ್ಮಾಣ ಮಾಡಿದ ರಾಮಮಂದಿರದಲ್ಲಿ (Ram Mandir) ರಾಮಲಲ್ಲಾ ದೇವರ ದರ್ಶನ ಪಡೆಯಲು ಸಾವಿರಾರು ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಇದೀಗ ಅಮಿತಾಭ್, ಸಿಐಎಸ್‌ಎಫ್ ಬಿಗಿ ಭದ್ರತೆಯಲ್ಲಿ ರಾಮಮಂದಿರಕ್ಕೆ ಆಗಮಿಸಿದ್ದಾರೆ. ಅವರು ಗರ್ಭಗುಡಿ ಮುಂಭಾಗದಲ್ಲಿ ನಿಂತು ರಾಮಲಲ್ಲಾನ ದರ್ಶನ ಪಡೆದರು. ರಾಮ ಮಂದಿರದಲ್ಲಿ ಧ್ಯಾನ ಮಾಡಿ, ವಾಸ್ತುಶಿಲ್ಪವನ್ನು ಕಣ್ತುಂಬಿಕೊಂಡರು. ಇದನ್ನೂ ಓದಿ:ಶ್ರೀದೇವಿ ಪುತ್ರಿ ಜಾನ್ವಿಗೆ ಅವಕಾಶ ಕೊಟ್ಟ ಕರಣ್ ಜೋಹಾರ್

ಕಳೆದ ತಿಂಗಳು ಜ.22ರಂದು ಅಮಿತಾಭ್‌ಗೆ ಅಯೋಧ್ಯೆಯ ಉದ್ಘಾಟನೆಗೆ ಆಹ್ವಾನ ನೀಡಿದ್ದರು. ಅದರಂತೆ ಪುತ್ರ ಅಭಿಷೇಕ್ ಬಚ್ಚನ್ ಜೊತೆ ಬಿಗ್ ಬಿ ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಿದ್ದರು.

ಅಮಿತಾಭ್ ಬಚ್ಚನ್ ಅಯೋಧ್ಯೆಯಲ್ಲಿ ಮನೆ ಹೊಂದಲು ನಿರ್ಧರಿಸಿದ್ದರು. ಹಾಗಾಗಿಯೇ ಅವರು ಅಯೋಧ್ಯೆಯಲ್ಲಿ ನಿವೇಶನ ಖರೀದಿಸಿದ್ದಾರೆ. ಮುಂಬೈ ಮೂಲದ ಡೆವಲಪರ್ ಕಂಪೆನಿಯಿಂದ ಈ ನಿವೇಶನ ಖರೀದಿ ಮಾಡಿದ್ದು, ನಿವೇಶನದ ಮೌಲ್ಯ 14.5 ಕೋಟಿ ರೂಪಾಯಿದಾಗಿದೆ.

ಅಂದಹಾಗೆ ಈ ನಿವೇಶನವು ಹತ್ತು ಸಾವಿರ ಚದರ ಅಡಿ ಅಳತೆಯನ್ನು ಹೊಂದಿದೆ. ವಿಮಾನ ನಿಲ್ದಾಣದಿಂದ 30 ನಿಮಿಷ ದೂರವಿದೆ ಎಂದು ಬಿಗ್ ಬಿ ಕೂಡ ಮಾಹಿತಿ ನೀಡಿದ್ದರು.

Share This Article