ಸಿಂಗಾಪುರದಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನ ಆರೋಗ್ಯದ ಬಗ್ಗೆ ಅಪ್‌ಡೇಟ್ ಕೊಟ್ರು ಚಿರಂಜೀವಿ

Public TV
2 Min Read

ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ (Singapore School Fire) ಗಾಯಗೊಂಡಿದ್ದ ಪವನ್ ಕಲ್ಯಾಣ್ (Pawan Kalyan) ಪುತ್ರ ಮಾರ್ಕ್ ಶಂಕರ್ (Mark Shankar) ಚಿಕಿತ್ಸೆಯ ಬಳಿಕ ಹೇಗಿದ್ದಾನೆ ಎಂಬುದನ್ನು ಚಿರಂಜೀವಿ ಮಾಹಿತಿ ಹಂಚಿಕೊಂಡಿದ್ದಾರೆ. ಶಂಕರ್ ಸದ್ಯ ವಿಶ್ರಾಂತಿ ಪಡೆಯುತ್ತಿದ್ದು, ಶೀಘ್ರದಲ್ಲೇ ಗುಣಮುಖನಾಗೋದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ:ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಗಾಯಗಳಾಗಿದೆ: ಪುತ್ರನ ಹೆಲ್ತ್ ಬಗ್ಗೆ ಅಪ್‌ಡೇಟ್‌ ಕೊಟ್ಟ ಪವನ್ ಕಲ್ಯಾಣ್

ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮಾರ್ಕ್ ಶಂಕರ್‌ನನ್ನು ನೋಡಲು ಪವನ್ ಕಲ್ಯಾಣ್ ಜೊತೆ ಚಿರಂಜೀವಿ ದಂಪತಿ ಸಿಂಗಾಪುರಕ್ಕೆ ಹೋಗಿದ್ದಾರೆ. ಈ ಬೆನ್ನಲ್ಲೇ ಪವನ್ ಪುತ್ರನ ಆರೋಗ್ಯ ಸ್ಥಿತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚಿರಂಜೀವಿ ಬರೆದುಕೊಂಡಿದ್ದಾರೆ. ನಮ್ಮ ಮಗ ಮಾರ್ಕ್ ಶಂಕರ್ ಮನೆಗೆ ಬಂದಿದ್ದಾನೆ. ಆದರೆ ಅವನು ಇನ್ನೂ ಚೇತರಿಸಿಕೊಳ್ಳಬೇಕಾಗಿದೆ. ನಮ್ಮ ಕುಲದೇವರಾದ ಆಂಜನೇಯನ ಕೃಪೆ ಮತ್ತು ಕರುಣೆಯಿಂದ, ಮಾರ್ಕ್ ಶಂಕರ್ ಶೀಘ್ರದಲ್ಲೇ ಸಂಪೂರ್ಣ ಗುಣವಾಗಿ, ಮೊದಲಿನಂತೆ ಆಗಲಿದ್ದಾನೆ. ಹನುಮಾನ್ ಜಯಂತಿಯಂದು (ಏ.11) ಆ ಪುಟ್ಟ ಮಗುವನ್ನು ದೊಡ್ಡ ಅಪಾಯ, ದುರಂತದಿಂದ ರಕ್ಷಿಸುವ ಮೂಲಕ ಆ ದೇವರು ನಮ್ಮೊಂದಿಗೆ ನಿಂತಿದ್ದಾನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ವಿಜಯ್ ಸೇತುಪತಿ ಸಿನಿಮಾದಲ್ಲಿ ಬಾಲಿವುಡ್ ಬೆಡಗಿ ಟಬು

ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ನಮ್ಮ ಕುಟುಂಬದ ಬೆಂಬಲಕ್ಕೆ ನಿಂತು, ಮಾರ್ಕ್ ಶಂಕರ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಎಲ್ಲರೂ ನಮ್ಮ ಮಗುವಿಗಾಗಿ ಪ್ರಾರ್ಥಿಸುತ್ತಿದ್ದಾರೆ, ಆಶೀರ್ವಾದಗಳನ್ನು ನೀಡುತ್ತಿದ್ದಾರೆ. ನನ್ನ ಪರವಾಗಿ, ನನ್ನ ಕಿರಿಯ ಸಹೋದರ ಪವನ್ ಕಲ್ಯಾಣ್ ಪರವಾಗಿ, ನಮ್ಮ ಇಡೀ ಕುಟುಂಬದ ಪರವಾಗಿ ನಿಮಗೆಲ್ಲರಿಗೂ ಧನ್ಯವಾದಗಳು ಎಂದು ಚಿರಂಜೀವಿ ತಿಳಿಸಿದ್ದಾರೆ.

ಅಂದಹಾಗೆ, ಏ.8ರಂದು ಸಿಂಗಾಪುರದಲ್ಲಿ ಬೇಸಿಗೆ ಶಿಬಿರದಲ್ಲಿ ಭಾಗಿಯಾಗಿದ್ದ ಮಾರ್ಕ್ ಶಂಕರ್ ಭಾಗಿಯಾಗಿದ್ದು, ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಒಂದು ಮಗು ಸಾವನ್ನಪ್ಪಿದ್ದರೆ ಇನ್ನೂ ಕೆಲವು ಮಕ್ಕಳು ಗಾಯಗೊಂಡಿದ್ದರು. ಅದರಲ್ಲಿ ಪವನ್ ಪುತ್ರ ಶಂಕರ್‌ಗೆ ಕೈ ಮತ್ತು ಕಾಲುಗಳಿಗೂ ಗಾಯವಾಗಿತ್ತು. ಅಲ್ಲದೆ, ಆತ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ. ಕೂಡಲೇ ಮಾರ್ಕ್ ಶಂಕರ್‌ಗೆ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು.

Share This Article